Featured

ಇನ್ಮುಂದೆ ರಾಜ್ಯದ ಖಾಸಗಿ ಆಡಳಿತದ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ – vishwanews24

ಇನ್ಮುಂದೆ ರಾಜ್ಯದ ಖಾಸಗಿ ಆಡಳಿತದ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ

ಬೆಂಗಳೂರು: ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್ ಕಡ್ಡಾಯ ಮಾಡಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು ತಿಂಗಳು, ದೇಗುಲದ ಆಡಳಿತ ಮಂಡಳಿಯೇ ಈ ಬಗ್ಗೆ ಜಾಗೃತಿ ಮೂಡಿಸಲಿದೆ. ಆದರೆ ಮತ್ತೆ ಹಿಂದಿನ ರೀತಿಯೇ ಸಾರ್ವಜನಿಕರು ನಡೆದುಕೊಂಡರೆ, ಅಂತವರಿಗೆ ದೇವಾಲಯದ ಕೆಲ ಆಚರಣೆಗಳನ್ನ ನೀಡದಿರಲು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಭಾ ಚಿಂತನೆ ನಡೆಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನ ಧರಿಸಿ ಬರುವುದನ್ನ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ನಿಯಮ ಮೀರಿದ್ರೆ ಮಂಗಳಾರತಿ ಮತ್ತು ಪ್ರಸಾದ ನೀಡದಿರಲು ಪ್ಲ್ಯಾನ್ ಮಾಡಲಾಗ್ತಿದೆ. ಎಲ್ಲಾ ದೇವಾಲಯಗಳಲ್ಲೂ ಬೋರ್ಡ್‍ಗಳನ್ನ ಹಾಕಿ ಜಾಗೃತಿ ಮೂಡಿಸೋದಲ್ಲದೆ ಮೌಖಿಕವಾಗಿ ತಿಳಿ ಹೇಳುವ ಕೆಲಸಕ್ಕೆ ಮುಂದಾಗ್ತಿದೆ. ಈ ಹಿಂದೆ ವೈಕುಂಠ ಏಕಾದಶಿ ವೇಳೆ ಇದೇ ರೀತಿಯ ನಿಯಮಗಳನ್ನ ಕೆಲ ದೇವಾಲಯಗಳಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲಾ ದೇವಾಲಯದಲ್ಲೂ ಅಭಿಯಾನ ಆರಂಭಿಸಲಾಗಿದೆ.

ಹೊರ ದೇಶ ಅಥವಾ ಹೊರ ಭಾಗಗಳಿಂದ ಬರುವ ಭಕ್ತರನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ವತಿಯಿಂದಲೇ ಬಟ್ಟೆಗಳನ್ನು ನೀಡಲಿದ್ದಾರೆ. ಬಾಡಿಗೆ ಬಟ್ಟೆಗಳನ್ನ ಪಡೆದು ದೇವರ ದರ್ಶನ ಪಡೆದು ನಂತರ ಆ ಬಟ್ಟೆಗಳನ್ನ ದೇವಾಲಯದ ಕೌಂಟರ್‍ನಲ್ಲೇ ವಾಪಸ್ ನೀಡಬೇಕು. ಒಬ್ಬರು ಧರಿಸಿದ ಬಟ್ಟೆಯನ್ನ ಮತ್ತೊಬ್ಬರು ಧರಿಸುವ ಮುನ್ನ, ಶುದ್ದವಾಗಿ ಒಗೆಯಲು ಕೂಡ ದೇವಾಸ್ಥಾನದ ಆಡಳಿತ ಮಂಡಳಿಗಳು ಸಿದ್ಧತೆ ನಡೆಸಿವೆ.

ಒಟ್ಟಾರೆ ಸದ್ಯ ಖಾಸಗಿ ಆಡಳಿತ ಮಂಡಳಿಯ ರಾಜ್ಯದ 800ಕ್ಕೂ ಹೆಚ್ಚು ದೇವಾಲಯಗಳಲ್ಲಿ ಸದ್ಯ ಇದೇ ರೂಲ್ಸ್ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ಅಭಿಯಾನದ ಬಳಿಕ ಈರೂಲ್ಸ್‍ಗಳನ್ನ ಜಾರಿಗೆ ತರುವ ಸಾಧ್ಯತೆ ಇದೆ.

Vishwa News 24

Recent Posts

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

1 hour ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…

2 hours ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

2 hours ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

2 hours ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

2 hours ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

2 hours ago