Featured

ಇನ್ಮುಂದೆ ರಾಜ್ಯದ ಖಾಸಗಿ ಆಡಳಿತದ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ – vishwanews24

ಇನ್ಮುಂದೆ ರಾಜ್ಯದ ಖಾಸಗಿ ಆಡಳಿತದ ದೇಗುಲಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯ

ಬೆಂಗಳೂರು: ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್ ಕಡ್ಡಾಯ ಮಾಡಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು ತಿಂಗಳು, ದೇಗುಲದ ಆಡಳಿತ ಮಂಡಳಿಯೇ ಈ ಬಗ್ಗೆ ಜಾಗೃತಿ ಮೂಡಿಸಲಿದೆ. ಆದರೆ ಮತ್ತೆ ಹಿಂದಿನ ರೀತಿಯೇ ಸಾರ್ವಜನಿಕರು ನಡೆದುಕೊಂಡರೆ, ಅಂತವರಿಗೆ ದೇವಾಲಯದ ಕೆಲ ಆಚರಣೆಗಳನ್ನ ನೀಡದಿರಲು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಭಾ ಚಿಂತನೆ ನಡೆಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನ ಧರಿಸಿ ಬರುವುದನ್ನ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ನಿಯಮ ಮೀರಿದ್ರೆ ಮಂಗಳಾರತಿ ಮತ್ತು ಪ್ರಸಾದ ನೀಡದಿರಲು ಪ್ಲ್ಯಾನ್ ಮಾಡಲಾಗ್ತಿದೆ. ಎಲ್ಲಾ ದೇವಾಲಯಗಳಲ್ಲೂ ಬೋರ್ಡ್‍ಗಳನ್ನ ಹಾಕಿ ಜಾಗೃತಿ ಮೂಡಿಸೋದಲ್ಲದೆ ಮೌಖಿಕವಾಗಿ ತಿಳಿ ಹೇಳುವ ಕೆಲಸಕ್ಕೆ ಮುಂದಾಗ್ತಿದೆ. ಈ ಹಿಂದೆ ವೈಕುಂಠ ಏಕಾದಶಿ ವೇಳೆ ಇದೇ ರೀತಿಯ ನಿಯಮಗಳನ್ನ ಕೆಲ ದೇವಾಲಯಗಳಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲಾ ದೇವಾಲಯದಲ್ಲೂ ಅಭಿಯಾನ ಆರಂಭಿಸಲಾಗಿದೆ.

ಹೊರ ದೇಶ ಅಥವಾ ಹೊರ ಭಾಗಗಳಿಂದ ಬರುವ ಭಕ್ತರನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ವತಿಯಿಂದಲೇ ಬಟ್ಟೆಗಳನ್ನು ನೀಡಲಿದ್ದಾರೆ. ಬಾಡಿಗೆ ಬಟ್ಟೆಗಳನ್ನ ಪಡೆದು ದೇವರ ದರ್ಶನ ಪಡೆದು ನಂತರ ಆ ಬಟ್ಟೆಗಳನ್ನ ದೇವಾಲಯದ ಕೌಂಟರ್‍ನಲ್ಲೇ ವಾಪಸ್ ನೀಡಬೇಕು. ಒಬ್ಬರು ಧರಿಸಿದ ಬಟ್ಟೆಯನ್ನ ಮತ್ತೊಬ್ಬರು ಧರಿಸುವ ಮುನ್ನ, ಶುದ್ದವಾಗಿ ಒಗೆಯಲು ಕೂಡ ದೇವಾಸ್ಥಾನದ ಆಡಳಿತ ಮಂಡಳಿಗಳು ಸಿದ್ಧತೆ ನಡೆಸಿವೆ.

ಒಟ್ಟಾರೆ ಸದ್ಯ ಖಾಸಗಿ ಆಡಳಿತ ಮಂಡಳಿಯ ರಾಜ್ಯದ 800ಕ್ಕೂ ಹೆಚ್ಚು ದೇವಾಲಯಗಳಲ್ಲಿ ಸದ್ಯ ಇದೇ ರೂಲ್ಸ್ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ಅಭಿಯಾನದ ಬಳಿಕ ಈರೂಲ್ಸ್‍ಗಳನ್ನ ಜಾರಿಗೆ ತರುವ ಸಾಧ್ಯತೆ ಇದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

20 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

20 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago