ನವದೆಹಲಿ: “ಬೆಂಕಿ ಅವಘಡದಂತಹ ಪ್ರಕರಣಗಳು ಮರುಕಳಿಸಬಾರದು ಎನ್ನುವ ಉದ್ದೇಶದಿಂದ ರಾತ್ರಿ 11ರಿಂದ ಮುಂಜಾನೆ 5ರವರೆಗೆ ರೈಲಿನಲ್ಲಿ ಮೊಬೈಲ್ ಚಾರ್ಜಿಂಗ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳ ಚಾರ್ಜಿಂಗ್ ಅನ್ನು ನಿರ್ಬಂಧಿಸಲಾಗಿದೆ” ಎಂದು ಭಾರತೀಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.
ಇದು ಮಾತ್ರವಲ್ಲದೇ, ರೈಲಿನಲ್ಲಿ ಧೂಮಪಾನಕ್ಕೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿದೆ. ಈ ರೀತಿಯಾದ ಅಪರಾಧ ಎಸಗುವವರಿಗೆ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ರಾತ್ರಿ ಹೊತ್ತಿನಲ್ಲಿ ರೈಲು ಪ್ರಯಾಣದ ಸಂದರ್ಭ ಎಲೆಕ್ಟ್ರಾನಿಕ್ ಉಪಕರಣಗಳ ಚಾರ್ಜಿಂಗ್ ಜಾಸ್ತಿಯಾದ ಪರಿಣಾಮ ಡಿವೈಸ್ ಬಿಸಿಯಾಗಿ ಸಣ್ಣ ಪ್ರಮಾಣದಲ್ಲಿ ಅಗ್ನಿ ಅವಘಡವಾಗಿರುವ ಹಿನ್ನೆಲೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ : ಮಂಗಳೂರು:ಕೋವಿಡ್ ನಿಯಮ ಪಾಲನೆಯೊಂದಿಗೆ ಈಗಾಗಲೇ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮ ನಡೆಸಬಹುದು : ಸಚಿವ ಕೋಟ ಸ್ಪಷ್ಟನೆ -Vishwanews24
“ಮಾರ್ಚ್ 16ರಿಂದಲೇ ಪಶ್ಚಿಮ ರೈಲ್ವೆ ವಿಭಾಗವು ಇದನ್ನು ಕಾರ್ಯರೂಪಕ್ಕೆ ತಂದಿದ್ದು, ರಾತ್ರಿ ವೇಳೆ ಚಾರ್ಜಿಂಗ್ ಅನ್ನು ನಿಷೇಧಿಸಲಾಗಿದೆ. ಈ ಬಗ್ಗೆ ರೈಲ್ವೆ ಮಂಡಳಿ ಎಲ್ಲಾ ರೈಲ್ವೆಗಳಿಗೆ ಸೂಚನೆ ರವಾನಿಸಿದ್ದು, ಅದರಂತೆ ಮಾರ್ಚ್ 16ರಂದು ಜಾರಿಗೊಳಿಸಿದ್ದೇವೆ” ಎಂದು ಪಶ್ಚಿಮ ರೈಲ್ವೆಯ ಸಿಆರ್ಪಿಒ ಸುಮಿತ್ ಠಾಕೂರ್ ಮಾಹಿತಿ ನೀಡಿದ್ದಾರೆ.
“ಇದು ಹೊಸ ಸೂಚನೆಗಳೇನಲ್ಲ. ರೈಲ್ವೆ ಮಂಡಳಿಯ ಹಿಂದಿನ ಆದೇಶಗಳನ್ನು ಪುನರ್ ಉಲ್ಲೇಖಿಸಲಾಗಿದೆ. ಇತ್ತೀಚೆಗೆ ರೈಲಿನಲ್ಲಿ ಬೆಂಕಿ ಅವಘಡಗಳು ನಡೆಯುತ್ತಿರುವ ಹಿನ್ನೆಲೆ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ರಾತ್ರಿ 11ರಿಂದ ಬೆಳಗ್ಗೆ 5ರ ತನಕ ರೈಲಿನ ಮೈನ್ ಸ್ವಿಚ್ ಬೋರ್ಡ್ನಿಂದ ಪವರ್ ಆಫ್ ಮಾಡಿಡಲಾಗುತ್ತದೆ” ಎಂದು ದಕ್ಷಿಣ ರೈಲ್ವೆ ಸಿಪಿಆರ್ಒ ಬಿ ಗುಣನೇಸನ್ ಹೇಳಿದ್ದಾರೆ.
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…