Featured

ಇನ್ಮುಂದೆ ವಾಟ್ಸ್‌ಆ್ಯಪ್ ಸೇರಿ ಪ್ರಮುಖ ಮೆಸೇಜಿಂಗ್ ಅಪ್ಲಿಕೇಶನ್‌ ಬಳಸಲು ಫೋನ್‌ನಲ್ಲಿ ಸಿಮ್ ಕಾರ್ಡ್ ಕಡ್ಡಾಯ – vishwanews24

ಇನ್ಮುಂದೆ ಫೋನ್‌ನಲ್ಲಿ ಅದೇ ಸಿಮ್ ಇದ್ದರೆ ಮಾತ್ರ ವಾಟ್ಸ್ಆ್ಯಪ್ ಪ್ರವೇಶ ಸಾಧ್ಯ..

ಫೋನ್‌ನಲ್ಲಿ ಸಕ್ರಿಯ ಸಿಮ್ ಇದ್ದರಷ್ಟೇ ಆಪ್‌ಗಳಿಗೆ ಅನುಮತಿ

ನವದೆಹಲಿ: ಮುಂದಿನ ದಿನಗಳಲ್ಲಿ ವಾಟ್ಸ್‌ಆ್ಯಪ್, ಟೆಲಿಗ್ರಾಂ, ಸ್ನ್ಯಾಪ್‌ಚಾಟ್ ಸೇರಿದಂತೆ ಪ್ರಮುಖ ಮೆಸೇಜಿಂಗ್ ಅಪ್ಲಿಕೇಶನ್‌ಗಳನ್ನು ಬಳಸಲು ನಿಮ್ಮ ಫೋನ್‌ನಲ್ಲಿ ಸಿಮ್ ಕಾರ್ಡ್ ಕಡ್ಡಾಯವಾಗಲಿದೆ. ಇದಕ್ಕಾಗಿ ದೂರಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೂ ಹಾಗೂ ಹಲವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೂ ಹೊಸ ನಿರ್ದೇಶನಗಳನ್ನು ಜಾರಿಗೊಳಿಸಿದೆ.

ಇಲ್ಲಿಯವರೆಗೂ, ಯಾವುದೇ ಫೋನ್‌ನಲ್ಲಿರುವ ಸಿಮ್‌ಗೆ OTP ಬಂದರೆ, ಬೇರೆ ಡಿವೈಸ್‌ನಲ್ಲೂ ಅಪ್ಲಿಕೇಶನ್‌ಗಳನ್ನು ಬಳಸುವ ಅವಕಾಶ ಇತ್ತು. ಆದರೆ ಹೊಸ ನಿಯಮ ಜಾರಿಗೆ ಬಂದ ನಂತರ, ಸಿಮ್ ಕಾರ್ಡ್ ಫೋನ್‌ನಲ್ಲಿ ಇರದೇ ಇದ್ದರೆ ಆಪ್‌ಗಳಿಗೆ ಪ್ರವೇಶ ಲಭ್ಯವಿರುವುದಿಲ್ಲ.

ಸೈಬರ್ ಅಪರಾಧ ತಡೆಯಲು ಕಡ್ಡಾಯ ನಿಯಮ: ವಾಟ್ಸ್‌ಆ್ಯಪ್, ಟೆಲಿಗ್ರಾಂ, ಸಿಗ್ನಲ್, ಅರಟ್ಟೈ, ಸ್ನ್ಯಾಪ್‌ಚಾಟ್, ಶೇರ್‌ಚಾಟ್, ಜಿಯೋಚಾಟ್ ಮತ್ತು ಜೋಶ್‌ ಅಪ್ಲಿಕೇಶನ್‌ಗಳಿಗೆ ಕೇಂದ್ರವು ನೀಡಿರುವ ನಿರ್ದೇಶನದಲ್ಲಿ “ಸಿಮ್ ಬೈಂಡಿಂಗ್ ” ಕಡ್ಡಾಯವಾಗಿ ಜಾರಿ ಮಾಡಬೇಕೆಂದು ಹೇಳಲಾಗಿದೆ.

ತಮ್ಮ ಮೊಬೈಲ್ ಸಂಖ್ಯೆಯಿಂದ ಸೈನ್‌ಇನ್ ಮಾಡುವ ಕೆಲವು ಆ್ಯಪ್‌ಗಳು ಸಿಮ್ ತೆಗೆದರೂ ಕೂಡಾ ಕೆಲಸ ಮಾಡುತ್ತಿವೆ. ಸೈಬರ್ ವಂಚಕರು ಇದನ್ನು ದುರುಪಯೋಗಪಡಿಸಿಕೊಂಡು, ಬೇರೆ ಸಾಧನಗಳಿಂದ ನಕಲಿ ಖಾತೆಗಳು ರಚಿಸುವುದು, ವಂಚನೆ ಮಾಡುವುದು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಬ್ಯಾಂಕುಗಳು ಹಾಗೂ ಯುಪಿಐ ಆ್ಯಪ್‌ಗಳಲ್ಲಿ ಈಗಾಗಲೇ ಸಿಮ್ ಬೈಂಡಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ಸಿಮ್ ಕಾರ್ಡ್ ತೆಗೆದರೆ ಆ್ಯಪ್‌ಗಳು ಕಾರ್ಯನಿರ್ವಹಿಸುವುದಿಲ್ಲ. ಈಗ ಅದೇ ನಿಯಮವನ್ನು ಮೆಸೇಜಿಂಗ್ ಆ್ಯಪ್‌ಗಳಿಗೂ ವಿಸ್ತರಿಸಲಾಗಿದೆ.

ಹೊಸ ನಿಯಮ ಏನು?:
-ಫೋನ್‌ನಲ್ಲಿ ಸಿಮ್ ಇರದೇ ಇದ್ದರೆ ಅಪ್ಲಿಕೇಶನ್‌ ತೆರೆದು ಬಳಸಲು ಸಾಧ್ಯವಿಲ್ಲ.
-OTP ಮೂಲಕ ಮೊತ್ತ ಮೊದಲ ವೆರಿಫಿಕೇಷನ್ ಮಾಡಿದರೂ, ನಂತರ ಸಿಮ್ ತೆಗೆದುಬಿಟ್ಟರೆ ಆ್ಯಪ್‌ ನಿರ್ವಹಣೆ ನಿಲ್ಲಲಿದೆ.
-ವಂಚನೆ, ನಕಲಿ ಖಾತೆಗಳು, ಸೈಬರ್ ಕ್ರೈಮ್‌ಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ನಿಯಮ ಜಾರಿಯಾಗಲಿದೆ.

ಪೊಲೀಸರ ಪ್ರಕಾರ ಹಲವು ವಂಚಕರು ದೂರದಿಂದಲೇ ಸಾಮಾಜಿಕ ಮಾಧ್ಯಮದ ಮೂಲಕ ಹಣ ವರ್ಗಾವಣೆ, ಫ್ರಾಡ್ ಲಿಂಕ್‌ಗಳು, ನಕಲಿ ಖಾತೆಗಳಿಂದ ಜನರನ್ನು ವಂಚಿಸುತ್ತಿದ್ದರು. ಸಿಮ್ ಬೈಂಡಿಂಗ್ ಜಾರಿಯಾದರೆ, ಅಪರಾಧಿಗಳ ಪತ್ತೆ ಸುಲಭವಾಗುತ್ತದೆ ಹಾಗೂ ದುರುಪಯೋಗ ಕಡಿಮೆಯಾಗಲಿದೆ ಎಂದು ಸರ್ಕಾರ ನಂಬಿದೆ. ಹೊಸ ನಿಯಮಗಳ ಜಾರಿ ವೇಳಾಪಟ್ಟಿ ಶೀಘ್ರದಲ್ಲೇ ಹೊರ ಬೀಳಲಿದೆ ಎಂದು ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago