Featured

ಇನ್ಮುಂದೆ ವಾಟ್ಸ್‌ಆ್ಯಪ್ ಸೇರಿ ಪ್ರಮುಖ ಮೆಸೇಜಿಂಗ್ ಅಪ್ಲಿಕೇಶನ್‌ ಬಳಸಲು ಫೋನ್‌ನಲ್ಲಿ ಸಿಮ್ ಕಾರ್ಡ್ ಕಡ್ಡಾಯ – vishwanews24

ಇನ್ಮುಂದೆ ಫೋನ್‌ನಲ್ಲಿ ಅದೇ ಸಿಮ್ ಇದ್ದರೆ ಮಾತ್ರ ವಾಟ್ಸ್ಆ್ಯಪ್ ಪ್ರವೇಶ ಸಾಧ್ಯ..

ಫೋನ್‌ನಲ್ಲಿ ಸಕ್ರಿಯ ಸಿಮ್ ಇದ್ದರಷ್ಟೇ ಆಪ್‌ಗಳಿಗೆ ಅನುಮತಿ

ನವದೆಹಲಿ: ಮುಂದಿನ ದಿನಗಳಲ್ಲಿ ವಾಟ್ಸ್‌ಆ್ಯಪ್, ಟೆಲಿಗ್ರಾಂ, ಸ್ನ್ಯಾಪ್‌ಚಾಟ್ ಸೇರಿದಂತೆ ಪ್ರಮುಖ ಮೆಸೇಜಿಂಗ್ ಅಪ್ಲಿಕೇಶನ್‌ಗಳನ್ನು ಬಳಸಲು ನಿಮ್ಮ ಫೋನ್‌ನಲ್ಲಿ ಸಿಮ್ ಕಾರ್ಡ್ ಕಡ್ಡಾಯವಾಗಲಿದೆ. ಇದಕ್ಕಾಗಿ ದೂರಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೂ ಹಾಗೂ ಹಲವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೂ ಹೊಸ ನಿರ್ದೇಶನಗಳನ್ನು ಜಾರಿಗೊಳಿಸಿದೆ.

ಇಲ್ಲಿಯವರೆಗೂ, ಯಾವುದೇ ಫೋನ್‌ನಲ್ಲಿರುವ ಸಿಮ್‌ಗೆ OTP ಬಂದರೆ, ಬೇರೆ ಡಿವೈಸ್‌ನಲ್ಲೂ ಅಪ್ಲಿಕೇಶನ್‌ಗಳನ್ನು ಬಳಸುವ ಅವಕಾಶ ಇತ್ತು. ಆದರೆ ಹೊಸ ನಿಯಮ ಜಾರಿಗೆ ಬಂದ ನಂತರ, ಸಿಮ್ ಕಾರ್ಡ್ ಫೋನ್‌ನಲ್ಲಿ ಇರದೇ ಇದ್ದರೆ ಆಪ್‌ಗಳಿಗೆ ಪ್ರವೇಶ ಲಭ್ಯವಿರುವುದಿಲ್ಲ.

ಸೈಬರ್ ಅಪರಾಧ ತಡೆಯಲು ಕಡ್ಡಾಯ ನಿಯಮ: ವಾಟ್ಸ್‌ಆ್ಯಪ್, ಟೆಲಿಗ್ರಾಂ, ಸಿಗ್ನಲ್, ಅರಟ್ಟೈ, ಸ್ನ್ಯಾಪ್‌ಚಾಟ್, ಶೇರ್‌ಚಾಟ್, ಜಿಯೋಚಾಟ್ ಮತ್ತು ಜೋಶ್‌ ಅಪ್ಲಿಕೇಶನ್‌ಗಳಿಗೆ ಕೇಂದ್ರವು ನೀಡಿರುವ ನಿರ್ದೇಶನದಲ್ಲಿ “ಸಿಮ್ ಬೈಂಡಿಂಗ್ ” ಕಡ್ಡಾಯವಾಗಿ ಜಾರಿ ಮಾಡಬೇಕೆಂದು ಹೇಳಲಾಗಿದೆ.

ತಮ್ಮ ಮೊಬೈಲ್ ಸಂಖ್ಯೆಯಿಂದ ಸೈನ್‌ಇನ್ ಮಾಡುವ ಕೆಲವು ಆ್ಯಪ್‌ಗಳು ಸಿಮ್ ತೆಗೆದರೂ ಕೂಡಾ ಕೆಲಸ ಮಾಡುತ್ತಿವೆ. ಸೈಬರ್ ವಂಚಕರು ಇದನ್ನು ದುರುಪಯೋಗಪಡಿಸಿಕೊಂಡು, ಬೇರೆ ಸಾಧನಗಳಿಂದ ನಕಲಿ ಖಾತೆಗಳು ರಚಿಸುವುದು, ವಂಚನೆ ಮಾಡುವುದು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಬ್ಯಾಂಕುಗಳು ಹಾಗೂ ಯುಪಿಐ ಆ್ಯಪ್‌ಗಳಲ್ಲಿ ಈಗಾಗಲೇ ಸಿಮ್ ಬೈಂಡಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ಸಿಮ್ ಕಾರ್ಡ್ ತೆಗೆದರೆ ಆ್ಯಪ್‌ಗಳು ಕಾರ್ಯನಿರ್ವಹಿಸುವುದಿಲ್ಲ. ಈಗ ಅದೇ ನಿಯಮವನ್ನು ಮೆಸೇಜಿಂಗ್ ಆ್ಯಪ್‌ಗಳಿಗೂ ವಿಸ್ತರಿಸಲಾಗಿದೆ.

ಹೊಸ ನಿಯಮ ಏನು?:
-ಫೋನ್‌ನಲ್ಲಿ ಸಿಮ್ ಇರದೇ ಇದ್ದರೆ ಅಪ್ಲಿಕೇಶನ್‌ ತೆರೆದು ಬಳಸಲು ಸಾಧ್ಯವಿಲ್ಲ.
-OTP ಮೂಲಕ ಮೊತ್ತ ಮೊದಲ ವೆರಿಫಿಕೇಷನ್ ಮಾಡಿದರೂ, ನಂತರ ಸಿಮ್ ತೆಗೆದುಬಿಟ್ಟರೆ ಆ್ಯಪ್‌ ನಿರ್ವಹಣೆ ನಿಲ್ಲಲಿದೆ.
-ವಂಚನೆ, ನಕಲಿ ಖಾತೆಗಳು, ಸೈಬರ್ ಕ್ರೈಮ್‌ಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ನಿಯಮ ಜಾರಿಯಾಗಲಿದೆ.

ಪೊಲೀಸರ ಪ್ರಕಾರ ಹಲವು ವಂಚಕರು ದೂರದಿಂದಲೇ ಸಾಮಾಜಿಕ ಮಾಧ್ಯಮದ ಮೂಲಕ ಹಣ ವರ್ಗಾವಣೆ, ಫ್ರಾಡ್ ಲಿಂಕ್‌ಗಳು, ನಕಲಿ ಖಾತೆಗಳಿಂದ ಜನರನ್ನು ವಂಚಿಸುತ್ತಿದ್ದರು. ಸಿಮ್ ಬೈಂಡಿಂಗ್ ಜಾರಿಯಾದರೆ, ಅಪರಾಧಿಗಳ ಪತ್ತೆ ಸುಲಭವಾಗುತ್ತದೆ ಹಾಗೂ ದುರುಪಯೋಗ ಕಡಿಮೆಯಾಗಲಿದೆ ಎಂದು ಸರ್ಕಾರ ನಂಬಿದೆ. ಹೊಸ ನಿಯಮಗಳ ಜಾರಿ ವೇಳಾಪಟ್ಟಿ ಶೀಘ್ರದಲ್ಲೇ ಹೊರ ಬೀಳಲಿದೆ ಎಂದು ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

12 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

13 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

13 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago