Featured

ಇನ್ಮುಂದೆ ವಾಟ್ಸ್‌ಆ್ಯಪ್ ಸೇರಿ ಪ್ರಮುಖ ಮೆಸೇಜಿಂಗ್ ಅಪ್ಲಿಕೇಶನ್‌ ಬಳಸಲು ಫೋನ್‌ನಲ್ಲಿ ಸಿಮ್ ಕಾರ್ಡ್ ಕಡ್ಡಾಯ – vishwanews24

ಇನ್ಮುಂದೆ ಫೋನ್‌ನಲ್ಲಿ ಅದೇ ಸಿಮ್ ಇದ್ದರೆ ಮಾತ್ರ ವಾಟ್ಸ್ಆ್ಯಪ್ ಪ್ರವೇಶ ಸಾಧ್ಯ..

ಫೋನ್‌ನಲ್ಲಿ ಸಕ್ರಿಯ ಸಿಮ್ ಇದ್ದರಷ್ಟೇ ಆಪ್‌ಗಳಿಗೆ ಅನುಮತಿ

ನವದೆಹಲಿ: ಮುಂದಿನ ದಿನಗಳಲ್ಲಿ ವಾಟ್ಸ್‌ಆ್ಯಪ್, ಟೆಲಿಗ್ರಾಂ, ಸ್ನ್ಯಾಪ್‌ಚಾಟ್ ಸೇರಿದಂತೆ ಪ್ರಮುಖ ಮೆಸೇಜಿಂಗ್ ಅಪ್ಲಿಕೇಶನ್‌ಗಳನ್ನು ಬಳಸಲು ನಿಮ್ಮ ಫೋನ್‌ನಲ್ಲಿ ಸಿಮ್ ಕಾರ್ಡ್ ಕಡ್ಡಾಯವಾಗಲಿದೆ. ಇದಕ್ಕಾಗಿ ದೂರಸಂಪರ್ಕ ಇಲಾಖೆ ಟೆಲಿಕಾಂ ಕಂಪನಿಗಳಿಗೂ ಹಾಗೂ ಹಲವು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೂ ಹೊಸ ನಿರ್ದೇಶನಗಳನ್ನು ಜಾರಿಗೊಳಿಸಿದೆ.

ಇಲ್ಲಿಯವರೆಗೂ, ಯಾವುದೇ ಫೋನ್‌ನಲ್ಲಿರುವ ಸಿಮ್‌ಗೆ OTP ಬಂದರೆ, ಬೇರೆ ಡಿವೈಸ್‌ನಲ್ಲೂ ಅಪ್ಲಿಕೇಶನ್‌ಗಳನ್ನು ಬಳಸುವ ಅವಕಾಶ ಇತ್ತು. ಆದರೆ ಹೊಸ ನಿಯಮ ಜಾರಿಗೆ ಬಂದ ನಂತರ, ಸಿಮ್ ಕಾರ್ಡ್ ಫೋನ್‌ನಲ್ಲಿ ಇರದೇ ಇದ್ದರೆ ಆಪ್‌ಗಳಿಗೆ ಪ್ರವೇಶ ಲಭ್ಯವಿರುವುದಿಲ್ಲ.

ಸೈಬರ್ ಅಪರಾಧ ತಡೆಯಲು ಕಡ್ಡಾಯ ನಿಯಮ: ವಾಟ್ಸ್‌ಆ್ಯಪ್, ಟೆಲಿಗ್ರಾಂ, ಸಿಗ್ನಲ್, ಅರಟ್ಟೈ, ಸ್ನ್ಯಾಪ್‌ಚಾಟ್, ಶೇರ್‌ಚಾಟ್, ಜಿಯೋಚಾಟ್ ಮತ್ತು ಜೋಶ್‌ ಅಪ್ಲಿಕೇಶನ್‌ಗಳಿಗೆ ಕೇಂದ್ರವು ನೀಡಿರುವ ನಿರ್ದೇಶನದಲ್ಲಿ “ಸಿಮ್ ಬೈಂಡಿಂಗ್ ” ಕಡ್ಡಾಯವಾಗಿ ಜಾರಿ ಮಾಡಬೇಕೆಂದು ಹೇಳಲಾಗಿದೆ.

ತಮ್ಮ ಮೊಬೈಲ್ ಸಂಖ್ಯೆಯಿಂದ ಸೈನ್‌ಇನ್ ಮಾಡುವ ಕೆಲವು ಆ್ಯಪ್‌ಗಳು ಸಿಮ್ ತೆಗೆದರೂ ಕೂಡಾ ಕೆಲಸ ಮಾಡುತ್ತಿವೆ. ಸೈಬರ್ ವಂಚಕರು ಇದನ್ನು ದುರುಪಯೋಗಪಡಿಸಿಕೊಂಡು, ಬೇರೆ ಸಾಧನಗಳಿಂದ ನಕಲಿ ಖಾತೆಗಳು ರಚಿಸುವುದು, ವಂಚನೆ ಮಾಡುವುದು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಬ್ಯಾಂಕುಗಳು ಹಾಗೂ ಯುಪಿಐ ಆ್ಯಪ್‌ಗಳಲ್ಲಿ ಈಗಾಗಲೇ ಸಿಮ್ ಬೈಂಡಿಂಗ್ ವ್ಯವಸ್ಥೆ ಜಾರಿಯಲ್ಲಿದೆ. ಸಿಮ್ ಕಾರ್ಡ್ ತೆಗೆದರೆ ಆ್ಯಪ್‌ಗಳು ಕಾರ್ಯನಿರ್ವಹಿಸುವುದಿಲ್ಲ. ಈಗ ಅದೇ ನಿಯಮವನ್ನು ಮೆಸೇಜಿಂಗ್ ಆ್ಯಪ್‌ಗಳಿಗೂ ವಿಸ್ತರಿಸಲಾಗಿದೆ.

ಹೊಸ ನಿಯಮ ಏನು?:
-ಫೋನ್‌ನಲ್ಲಿ ಸಿಮ್ ಇರದೇ ಇದ್ದರೆ ಅಪ್ಲಿಕೇಶನ್‌ ತೆರೆದು ಬಳಸಲು ಸಾಧ್ಯವಿಲ್ಲ.
-OTP ಮೂಲಕ ಮೊತ್ತ ಮೊದಲ ವೆರಿಫಿಕೇಷನ್ ಮಾಡಿದರೂ, ನಂತರ ಸಿಮ್ ತೆಗೆದುಬಿಟ್ಟರೆ ಆ್ಯಪ್‌ ನಿರ್ವಹಣೆ ನಿಲ್ಲಲಿದೆ.
-ವಂಚನೆ, ನಕಲಿ ಖಾತೆಗಳು, ಸೈಬರ್ ಕ್ರೈಮ್‌ಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ನಿಯಮ ಜಾರಿಯಾಗಲಿದೆ.

ಪೊಲೀಸರ ಪ್ರಕಾರ ಹಲವು ವಂಚಕರು ದೂರದಿಂದಲೇ ಸಾಮಾಜಿಕ ಮಾಧ್ಯಮದ ಮೂಲಕ ಹಣ ವರ್ಗಾವಣೆ, ಫ್ರಾಡ್ ಲಿಂಕ್‌ಗಳು, ನಕಲಿ ಖಾತೆಗಳಿಂದ ಜನರನ್ನು ವಂಚಿಸುತ್ತಿದ್ದರು. ಸಿಮ್ ಬೈಂಡಿಂಗ್ ಜಾರಿಯಾದರೆ, ಅಪರಾಧಿಗಳ ಪತ್ತೆ ಸುಲಭವಾಗುತ್ತದೆ ಹಾಗೂ ದುರುಪಯೋಗ ಕಡಿಮೆಯಾಗಲಿದೆ ಎಂದು ಸರ್ಕಾರ ನಂಬಿದೆ. ಹೊಸ ನಿಯಮಗಳ ಜಾರಿ ವೇಳಾಪಟ್ಟಿ ಶೀಘ್ರದಲ್ಲೇ ಹೊರ ಬೀಳಲಿದೆ ಎಂದು ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago