ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್ ; ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24

ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್

ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24

ಉಡುಪಿ: ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕರೊನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್‌ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಸಂಪೂರ್ಣ ಪ್ರದೇಶವನ್ನು ಲಾಕ್‌ಡೌನ್ ಅಥವಾ ಸೀಲ್‌ಡೌನ್ ಮಾಡುವ ಬದಲಿಗೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆಗಳನ್ನು ಸೀಲ್‌ಡೌನ್ ಮಾಡುವುದರಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದಲ್ಲದೆ ಇತರ ಚಟುವಟಿಕೆಗಳಿಗೂ ಅವಕಾಶವಾಗುತ್ತದೆ ಎಂದು ತಿಳಿಸಿದರು.

ಮುಂಬಯಿಯಿಂದ ವಲಸೆ ಬಂದಿರುವವರ ಕಾರಣದಿಂದಾಗಿ ಉಡುಪಿಯಲ್ಲಿ ಸೋಂಕು ಹೆಚ್ಚಾಗಿದ್ದು ಮಂಗಳವಾರ ಒಂದೇ ದಿನ 150 ಪ್ರಕರಣಗಳು ದಾಖಲಾಗಿವೆ. ನಾಗರಿಕರು ಆತಂಕಪಡುವುದು ಬೇಡ. ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ವಲಸೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಉಡುಪಿಯಲ್ಲಿ ಈಗಾಗಲೇ ಒಂದು ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಪ್ರಯೋಗಾಲಯ ಸ್ಥಾಪಿಸುವುದಾಗಿ ಸಚಿವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಹಸಿರುವಲಯದಲ್ಲಿದ್ದ ಉಡುಪಿ ಜಿಲ್ಲೆ ಇಂದು ಬೆಂಗಳೂರನ್ನು ಹಿಂದಿಕ್ಕಿ ಮೊದಲನೇ ಸ್ಥಾನದಲ್ಲಿದೆ. ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಸಾರ್ವಜನಿಕರು ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಹೇಳಿದರು.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅನ್ವಯವಾಗುವ ನಿಯಮಗಳು ಮಂಗಳೂರು ವಿಮಾನ ನಿಲ್ದಾಣಕ್ಕೂ ಅನ್ವಯವಾಗಲಿವೆ. ಈ ಕುರಿತಂತೆ ಶೀಘ್ರದಲ್ಲೇ ಆದೇಶವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು. ಐಸಿಎಂಆರ್ ಮಾರ್ಗಸೂಚಿಗಳನ್ನು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಲಾಗುವುದು. ಇದರ ಅನ್ವಯ ಪ್ರಯಾಣಿಕರು ಎರಡು ದಿನಗಳಷ್ಟೇ ಹಳೆಯದಾದ ಕೋವಿಡ್ ನೆಗೆಟೀವ್ ವರದಿಯನ್ನು ಏರ್‌ಪೋರ್ಟಿನಲ್ಲಿ ತೋರಿಸಬೇಕಾಗುವುದು. ನೆಗೆಟೀವ್ ಎಂದು ಖಚಿತವಾದರಷ್ಟೇ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

10 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

11 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

12 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

12 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

13 hours ago