ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್ ; ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24

ಇನ್ಮುಂದೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆ ಮಾತ್ರ ಸೀಲ್‌ಡೌನ್

ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು: ಡಾ.ಕೆ.ಸುಧಾಕರ್ -Vishwanews24

ಉಡುಪಿ: ಹೊರರಾಜ್ಯಗಳಿಂದ ಬಂದಿರುವ ವಲಸಿಗರ ಕಾರಣದಿಂದ ರಾಜ್ಯದಲ್ಲಿ ಕರೊನ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ವಲಸಿಗರ ಮನೆಗಳನ್ನು ಮಾತ್ರ ಸೀಲ್‌ಡೌನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಸಂಪೂರ್ಣ ಪ್ರದೇಶವನ್ನು ಲಾಕ್‌ಡೌನ್ ಅಥವಾ ಸೀಲ್‌ಡೌನ್ ಮಾಡುವ ಬದಲಿಗೆ ಸೋಂಕಿತ/ಶಂಕಿತ ವ್ಯಕ್ತಿಗಳ ಮನೆಗಳನ್ನು ಸೀಲ್‌ಡೌನ್ ಮಾಡುವುದರಿಂದ ಸೋಂಕು ಹರಡುವಿಕೆಯನ್ನು ನಿಯಂತ್ರಿಸಬಹುದಲ್ಲದೆ ಇತರ ಚಟುವಟಿಕೆಗಳಿಗೂ ಅವಕಾಶವಾಗುತ್ತದೆ ಎಂದು ತಿಳಿಸಿದರು.

ಮುಂಬಯಿಯಿಂದ ವಲಸೆ ಬಂದಿರುವವರ ಕಾರಣದಿಂದಾಗಿ ಉಡುಪಿಯಲ್ಲಿ ಸೋಂಕು ಹೆಚ್ಚಾಗಿದ್ದು ಮಂಗಳವಾರ ಒಂದೇ ದಿನ 150 ಪ್ರಕರಣಗಳು ದಾಖಲಾಗಿವೆ. ನಾಗರಿಕರು ಆತಂಕಪಡುವುದು ಬೇಡ. ಸರ್ಕಾರದ ವತಿಯಿಂದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಆಸ್ಪತ್ರೆಯಲ್ಲಿ ಹಾಸಿಗೆಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ವಲಸೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಉಡುಪಿಯಲ್ಲಿ ಈಗಾಗಲೇ ಒಂದು ಪ್ರಯೋಗಾಲಯ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಪ್ರಯೋಗಾಲಯ ಸ್ಥಾಪಿಸುವುದಾಗಿ ಸಚಿವರು ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಹಸಿರುವಲಯದಲ್ಲಿದ್ದ ಉಡುಪಿ ಜಿಲ್ಲೆ ಇಂದು ಬೆಂಗಳೂರನ್ನು ಹಿಂದಿಕ್ಕಿ ಮೊದಲನೇ ಸ್ಥಾನದಲ್ಲಿದೆ. ಜಿಲ್ಲೆಯನ್ನು ಮತ್ತೆ ಹಸಿರು ವಲಯಕ್ಕೆ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಸಾರ್ವಜನಿಕರು ಎಚ್ಚರಿಕೆಯಿಂದ ವರ್ತಿಸಬೇಕು ಎಂದು ಹೇಳಿದರು.

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಅನ್ವಯವಾಗುವ ನಿಯಮಗಳು ಮಂಗಳೂರು ವಿಮಾನ ನಿಲ್ದಾಣಕ್ಕೂ ಅನ್ವಯವಾಗಲಿವೆ. ಈ ಕುರಿತಂತೆ ಶೀಘ್ರದಲ್ಲೇ ಆದೇಶವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗುವುದು. ಐಸಿಎಂಆರ್ ಮಾರ್ಗಸೂಚಿಗಳನ್ನು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಲಾಗುವುದು. ಇದರ ಅನ್ವಯ ಪ್ರಯಾಣಿಕರು ಎರಡು ದಿನಗಳಷ್ಟೇ ಹಳೆಯದಾದ ಕೋವಿಡ್ ನೆಗೆಟೀವ್ ವರದಿಯನ್ನು ಏರ್‌ಪೋರ್ಟಿನಲ್ಲಿ ತೋರಿಸಬೇಕಾಗುವುದು. ನೆಗೆಟೀವ್ ಎಂದು ಖಚಿತವಾದರಷ್ಟೇ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗುವುದು ಎಂದು ತಿಳಿಸಿದರು.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

14 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

15 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

15 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

16 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

17 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

17 hours ago