ನವದೆಹಲಿ: ಇನ್ಮುಂದೆ ಯುಪಿಐ ಮೂಲಕ 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ಹಣ ತಕ್ಷಣ ಕಡಿತವಾಗುವುದಿಲ್ಲ. ಬದಲಿಗೆ ಒಂದು ಗಂಟೆ ಬಳಿಕ ಕಡಿತವಾಗುವಂತೆ ಮಾಡಲು ಆರ್ಬಿಐ (RBI) ಮುಂದಾಗಿದೆ.
ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ ದುಡ್ಡು ಕಡಿತವಾಗುವುದಿಲ್ಲ. ಬದಲಿಗೆ ಆ ಹಣವನ್ನು ಬ್ಯಾಂಕ್ ಒಂದು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ.
ಇದನ್ನೂ ಓದಿ :
ಆರ್ಬಿಐ ನಿಯಮದ ಪ್ರಕಾರ, 10 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ಯಾರ ಖಾತೆಗೆ ವರ್ಗಾಯಿಸಿರುತ್ತೀರೋ ಆ ಹಣ ತಕ್ಷಣ ಪಾವತಿ ಆಗುವುದಿಲ್ಲ ಅಥವಾ ಕಳಿಸಿದವರ ಖಾತೆ ಸೇರುವುದಿಲ್ಲ. ನೀವು ಕಳಿಸಿದ ಹಣವನ್ನು ಬ್ಯಾಂಕ್ ಒಂದು ಗಂಟೆ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಬಳಿಕ ಯಾರ ಖಾತೆ ಸೇರಬೇಕೋ ಆ ಖಾತೆಗೆ ಜಮೆಯಾಗುತ್ತದೆ.
ಒಂದು ವೇಳೆ ತಪ್ಪಾಗಿ ಅಥವಾ ಗೊತ್ತಿಲ್ಲದೆ ಹಣ ವರ್ಗಾವಣೆಯಾಗಿದ್ದರೆ ಒಂದು ಗಂಟೆಯ ಕಾಲವಕಾಶದ ಒಳಗೆ ಈ ಪಾವತಿಯನ್ನು ರದ್ದು ಮಾಡಲು ಗ್ರಾಹಕರಿಗೆ ಅವಕಾಶ ಸಿಗುತ್ತದೆ.
ಕಳೆದ ವರ್ಷ ಭಾರತದಲ್ಲಿ 22,931 ಕೋಟಿ ರೂ. ಡಿಜಿಟಲ್ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಜೊತೆಗೆ ದೇಶದಲ್ಲಿ 10 ಸಾವಿರ ರೂ.ಗಿಂತ ಹೆಚ್ಚಿನ ಹಣ ವರ್ಗಾವಣೆ ಪ್ರಕರಣಗಳಲ್ಲಿ ಹೆಚ್ಚಿನ ವಂಚನೆ, ತಪ್ಪಾಗಿ ಹಣ ವರ್ಗಾವಣೆ ವರದಿಯಾಗುತ್ತಿರುವ ಹಿನ್ನೆಲೆ ಆರ್ಬಿಐ ಈ ಪ್ರಸ್ತಾವನೆ ಬಗ್ಗೆ ಚಿಂತಿಸಿದೆ.
ಇದನ್ನೂ ಓದಿ :
ಇನ್ನೂ ಈ ನಿರ್ಧಾರ ನಿತ್ಯದ ಪಾವತಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಂದರೆ ಅಂಗಡಿಗಳಲ್ಲಿ ಖರೀದಿಯ ಮೇಲಿನ ಪಾವತಿಗಳು, ಇಎಂಐಗಳು, ಮ್ಯೂಚುವಲ್ ಫಂಡ್ ಎಸ್ಐಪಿ, ಎಲ್ಐಸಿ ಪ್ರೀಮಿಯಂ ಕಡಿತಗಳು, ಸಬ್ಸ್ಕ್ರಿಪ್ಪನ್ಗಳ ಮೇಲೆ ಈ ಹೊಸ ನಿಯಮವು ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ. ಇದಕ್ಕಾಗಿ ಬಳಕೆದಾರರು ನಿರ್ದಿಷ್ಟ ವ್ಯಕ್ತಿಗಳ ಪಟ್ಟಿ ಮಾಡುವ ಮೂಲಕ ಆ ವ್ಯಕ್ತಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಹಣದ ವರ್ಗಾವಣೆಯಾಗುವಂತೆ ನೋಡಿಕೊಳ್ಳಬಹುದಾಗಿದೆ. ಅನುಮಾನಾಸ್ಪದ ಹಾಗೂ ಹೊಸ ವರ್ಗಾವಣೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…
ಉಡುಪಿ: ಕ್ಷೇತ್ರ ಮರುವಿಂಗಡನೆ ಮಸೂದೆ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಉಡುಪಿ: ಕೇಂದ್ರ ಸರ್ಕಾರದ ಕ್ಷೇತ್ರ ಮರವಿಂಗಡನೆ ಮಸೂದೆ…
ಪರವಾನಿಗೆ ಭೂಮಾಪಕರ ಮುಷ್ಕರದಿಂದ ಸಾರ್ವಜನಿಕರಿಗೆ ಸಮಸ್ಯೆ ತಕ್ಷಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಪರವಾನಿಗೆ ಭೂಮಾಪಕರ ಮುಷ್ಕರದಿಂದ…
ಕಾಂಗ್ರೆಸ್ ನ ಮಹಿಳಾ ವಿರೋಧಿ ಮನಸ್ಥಿತಿ ಕೊಂಚವೂ ಬದಲಾಗಿಲ್ಲ: ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಕಾಂಗ್ರೆಸ್ನ ಮಹಿಳಾ ವಿರೋಧಿ ಮನಸ್ಥಿತಿ ಬದಲಾಗಿಲ್ಲ ಎಂದು…
ವಾಯುಪಡೆ ವಿಮಾನ ಹಾರ್ಡ್ ಲ್ಯಾಂಡಿಂಗ್; ಸ್ಥಗಿತಗೊಂಡಿದ್ದ ಪುಣೆ ಏರ್ಪೋರ್ಟ್ ಪುನಾರಂಭ ಪುಣೆ: ಭಾರತೀಯ ವಾಯುಪಡೆಯ ವಿಮಾನ ಹಾರ್ಡ್ ಲ್ಯಾಂಡಿಂಗ್ನಿಂದ ರಾತ್ರಿಯಿಡೀ…
ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…