Featured

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ ವಿಳಂಬ ..! ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ -vishwanews24

ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು

ನವದೆಹಲಿ: ಇನ್ಮುಂದೆ ಯುಪಿಐ  ಮೂಲಕ 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ಹಣ ತಕ್ಷಣ ಕಡಿತವಾಗುವುದಿಲ್ಲ. ಬದಲಿಗೆ ಒಂದು ಗಂಟೆ ಬಳಿಕ ಕಡಿತವಾಗುವಂತೆ ಮಾಡಲು ಆರ್‌ಬಿಐ (RBI) ಮುಂದಾಗಿದೆ.

ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ ದುಡ್ಡು ಕಡಿತವಾಗುವುದಿಲ್ಲ. ಬದಲಿಗೆ ಆ ಹಣವನ್ನು ಬ್ಯಾಂಕ್ ಒಂದು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ.

ಇದನ್ನೂ ಓದಿ :

ಆರ್‌ಬಿಐ ನಿಯಮದ ಪ್ರಕಾರ, 10 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ಯಾರ ಖಾತೆಗೆ ವರ್ಗಾಯಿಸಿರುತ್ತೀರೋ ಆ ಹಣ ತಕ್ಷಣ ಪಾವತಿ ಆಗುವುದಿಲ್ಲ ಅಥವಾ ಕಳಿಸಿದವರ ಖಾತೆ ಸೇರುವುದಿಲ್ಲ. ನೀವು ಕಳಿಸಿದ ಹಣವನ್ನು ಬ್ಯಾಂಕ್ ಒಂದು ಗಂಟೆ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಬಳಿಕ ಯಾರ ಖಾತೆ ಸೇರಬೇಕೋ ಆ ಖಾತೆಗೆ ಜಮೆಯಾಗುತ್ತದೆ.

ಒಂದು ವೇಳೆ ತಪ್ಪಾಗಿ ಅಥವಾ ಗೊತ್ತಿಲ್ಲದೆ ಹಣ ವರ್ಗಾವಣೆಯಾಗಿದ್ದರೆ ಒಂದು ಗಂಟೆಯ ಕಾಲವಕಾಶದ ಒಳಗೆ ಈ ಪಾವತಿಯನ್ನು ರದ್ದು ಮಾಡಲು ಗ್ರಾಹಕರಿಗೆ ಅವಕಾಶ ಸಿಗುತ್ತದೆ.

ಕಳೆದ ವರ್ಷ ಭಾರತದಲ್ಲಿ 22,931 ಕೋಟಿ ರೂ. ಡಿಜಿಟಲ್ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಜೊತೆಗೆ ದೇಶದಲ್ಲಿ 10 ಸಾವಿರ ರೂ.ಗಿಂತ ಹೆಚ್ಚಿನ ಹಣ ವರ್ಗಾವಣೆ ಪ್ರಕರಣಗಳಲ್ಲಿ ಹೆಚ್ಚಿನ ವಂಚನೆ, ತಪ್ಪಾಗಿ ಹಣ ವರ್ಗಾವಣೆ ವರದಿಯಾಗುತ್ತಿರುವ ಹಿನ್ನೆಲೆ ಆರ್‌ಬಿಐ ಈ ಪ್ರಸ್ತಾವನೆ ಬಗ್ಗೆ ಚಿಂತಿಸಿದೆ.

ಇದನ್ನೂ ಓದಿ :

ಇನ್ನೂ ಈ ನಿರ್ಧಾರ ನಿತ್ಯದ ಪಾವತಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಂದರೆ ಅಂಗಡಿಗಳಲ್ಲಿ ಖರೀದಿಯ ಮೇಲಿನ ಪಾವತಿಗಳು, ಇಎಂಐಗಳು, ಮ್ಯೂಚುವಲ್ ಫಂಡ್ ಎಸ್‌ಐಪಿ, ಎಲ್‌ಐಸಿ ಪ್ರೀಮಿಯಂ ಕಡಿತಗಳು, ಸಬ್‌ಸ್ಕ್ರಿಪ್ಪನ್‌ಗಳ ಮೇಲೆ ಈ ಹೊಸ ನಿಯಮವು ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ. ಇದಕ್ಕಾಗಿ ಬಳಕೆದಾರರು ನಿರ್ದಿಷ್ಟ ವ್ಯಕ್ತಿಗಳ ಪಟ್ಟಿ ಮಾಡುವ ಮೂಲಕ ಆ ವ್ಯಕ್ತಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಹಣದ ವರ್ಗಾವಣೆಯಾಗುವಂತೆ ನೋಡಿಕೊಳ್ಳಬಹುದಾಗಿದೆ. ಅನುಮಾನಾಸ್ಪದ ಹಾಗೂ ಹೊಸ ವರ್ಗಾವಣೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

13 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

13 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

13 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago