Featured

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ ವಿಳಂಬ ..! ಆರ್​ಬಿಐ ಹೊಸ ಕ್ರಮಕ್ಕೆ ಯೋಜನೆ -vishwanews24

ಯುಪಿಐ ಹೊಸ ರೂಲ್ಸ್ : 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು

ನವದೆಹಲಿ: ಇನ್ಮುಂದೆ ಯುಪಿಐ  ಮೂಲಕ 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ಹಣ ತಕ್ಷಣ ಕಡಿತವಾಗುವುದಿಲ್ಲ. ಬದಲಿಗೆ ಒಂದು ಗಂಟೆ ಬಳಿಕ ಕಡಿತವಾಗುವಂತೆ ಮಾಡಲು ಆರ್‌ಬಿಐ (RBI) ಮುಂದಾಗಿದೆ.

ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ ದುಡ್ಡು ಕಡಿತವಾಗುವುದಿಲ್ಲ. ಬದಲಿಗೆ ಆ ಹಣವನ್ನು ಬ್ಯಾಂಕ್ ಒಂದು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ.

ಇದನ್ನೂ ಓದಿ :

ಆರ್‌ಬಿಐ ನಿಯಮದ ಪ್ರಕಾರ, 10 ಸಾವಿರ ರೂ.ಗಿಂತ ಹೆಚ್ಚಿನ ಹಣವನ್ನು ಯಾರ ಖಾತೆಗೆ ವರ್ಗಾಯಿಸಿರುತ್ತೀರೋ ಆ ಹಣ ತಕ್ಷಣ ಪಾವತಿ ಆಗುವುದಿಲ್ಲ ಅಥವಾ ಕಳಿಸಿದವರ ಖಾತೆ ಸೇರುವುದಿಲ್ಲ. ನೀವು ಕಳಿಸಿದ ಹಣವನ್ನು ಬ್ಯಾಂಕ್ ಒಂದು ಗಂಟೆ ಕಾಲ ಹಿಡಿದಿಟ್ಟುಕೊಳ್ಳುತ್ತದೆ. ಬಳಿಕ ಯಾರ ಖಾತೆ ಸೇರಬೇಕೋ ಆ ಖಾತೆಗೆ ಜಮೆಯಾಗುತ್ತದೆ.

ಒಂದು ವೇಳೆ ತಪ್ಪಾಗಿ ಅಥವಾ ಗೊತ್ತಿಲ್ಲದೆ ಹಣ ವರ್ಗಾವಣೆಯಾಗಿದ್ದರೆ ಒಂದು ಗಂಟೆಯ ಕಾಲವಕಾಶದ ಒಳಗೆ ಈ ಪಾವತಿಯನ್ನು ರದ್ದು ಮಾಡಲು ಗ್ರಾಹಕರಿಗೆ ಅವಕಾಶ ಸಿಗುತ್ತದೆ.

ಕಳೆದ ವರ್ಷ ಭಾರತದಲ್ಲಿ 22,931 ಕೋಟಿ ರೂ. ಡಿಜಿಟಲ್ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಜೊತೆಗೆ ದೇಶದಲ್ಲಿ 10 ಸಾವಿರ ರೂ.ಗಿಂತ ಹೆಚ್ಚಿನ ಹಣ ವರ್ಗಾವಣೆ ಪ್ರಕರಣಗಳಲ್ಲಿ ಹೆಚ್ಚಿನ ವಂಚನೆ, ತಪ್ಪಾಗಿ ಹಣ ವರ್ಗಾವಣೆ ವರದಿಯಾಗುತ್ತಿರುವ ಹಿನ್ನೆಲೆ ಆರ್‌ಬಿಐ ಈ ಪ್ರಸ್ತಾವನೆ ಬಗ್ಗೆ ಚಿಂತಿಸಿದೆ.

ಇದನ್ನೂ ಓದಿ :

ಇನ್ನೂ ಈ ನಿರ್ಧಾರ ನಿತ್ಯದ ಪಾವತಿಗಳ ಮೇಲೆ ಪರಿಣಾಮ ಬೀರುವುದಿಲ್ಲ. ಅಂದರೆ ಅಂಗಡಿಗಳಲ್ಲಿ ಖರೀದಿಯ ಮೇಲಿನ ಪಾವತಿಗಳು, ಇಎಂಐಗಳು, ಮ್ಯೂಚುವಲ್ ಫಂಡ್ ಎಸ್‌ಐಪಿ, ಎಲ್‌ಐಸಿ ಪ್ರೀಮಿಯಂ ಕಡಿತಗಳು, ಸಬ್‌ಸ್ಕ್ರಿಪ್ಪನ್‌ಗಳ ಮೇಲೆ ಈ ಹೊಸ ನಿಯಮವು ಯಾವುದೇ ಪರಿಣಾಮ ಬೀರುವುದಿಲ್ಲ ಎನ್ನಲಾಗಿದೆ. ಇದಕ್ಕಾಗಿ ಬಳಕೆದಾರರು ನಿರ್ದಿಷ್ಟ ವ್ಯಕ್ತಿಗಳ ಪಟ್ಟಿ ಮಾಡುವ ಮೂಲಕ ಆ ವ್ಯಕ್ತಿಗಳಿಗೆ ಯಾವುದೇ ಅಡೆತಡೆ ಇಲ್ಲದೆ ಹಣದ ವರ್ಗಾವಣೆಯಾಗುವಂತೆ ನೋಡಿಕೊಳ್ಳಬಹುದಾಗಿದೆ. ಅನುಮಾನಾಸ್ಪದ ಹಾಗೂ ಹೊಸ ವರ್ಗಾವಣೆಗಳಿಗೆ ಇದು ಅನ್ವಯವಾಗಲಿದೆ ಎಂದು ಹೇಳಲಾಗಿದೆ.

Vishwa News 24

Recent Posts

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು – vishwanews24

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ  ಭಾಗವಹಿಸಿದ್ದ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ…

3 minutes ago

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್. ಅಶೋಕ್  – vishwanews24

ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ : ಆರ್ ಅಶೋಕ್  ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್…

13 minutes ago

ಕಾಪು : ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ – vishwanews24

ಕಾಪು: ಪತಿಯ ಲಾಕರ್‌ ಕೀ ಕಳವು ಮಾಡಿ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಪತ್ನಿ ಉಡುಪಿ: ನಗರದಲ್ಲಿ ವಿಚಿತ್ರ ಕಳ್ಳತನ…

2 hours ago

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ ರಾಯಚೂರು: ಬಯಲು…

3 hours ago

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ – vishwanews24

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಬರ್ಟ್ ವಾದ್ರಾ ಉಡುಪಿ: ಇಲ್ಲಿನ ಶ್ರೀ ಕೃಷ್ಣ…

3 hours ago

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ – vishwanews24

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ ಮಾಡಲು ಸರಕಾರ ಬದ್ಧ: ದಿನೇಶ್ ಗುಂಡೂರಾವ್ ಮಂಗಳೂರು: ಮಂಗಳೂರನ್ನು ರಾಜ್ಯದ…

4 hours ago