Featured

ಇನ್ಶುರೆನ್ಸ್ ಹಣಕ್ಕಾಗಿ ಸಾವಿನ ನಾಟಕ ; ಅರಿಯದೆ ಬಲಿಪಶುವಾದರು ಪತ್ನಿ ಮತ್ತು ಮಕ್ಕಳು

ಬೀಜಿಂಗ್: ವ್ಯಕ್ತಿಯೊಬ್ಬ ಇನ್ಶುರೆನ್ಸ್ ಹಣದ ಆಸೆಯಿಂದ ಸ್ವತಃ ತಾನೇ ಸತ್ತಿದ್ದೇನೆ ಎಂದು ಬಿಂಬಿಸಿದ್ದಾನೆ. ಆದರೆ ಪತ್ನಿ ಮತ್ತು ಮಕ್ಕಳು ನಿಜವಾಗಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ.

ಈ ಘಟನೆ ಚೀನಾದ ದಕ್ಷಿಣ ಪ್ರಾಂತ್ಯದಲ್ಲಿ ನಡೆದಿದೆ. 34 ವರ್ಷ ವಯಸ್ಸಿನ ವ್ಯಕ್ತಿ ಇಂತಹ ನಾಟಕವಾಡಿ, ಪತ್ನಿ-ಮಕ್ಕಳ ಸಾವಿಗೆ ಕಾರಣವಾಗಿದ್ದಾನೆ. ಈತ ಇನ್ಶುರೆನ್ಸ್ ಹಣದ ಆಸೆಗಾಗಿ ತಾನು ಮೃತಪಟ್ಟಿದ್ದೇನೆ ಎಂದು ಎಲ್ಲರನ್ನು ನಂಬಿಸಲು ಪ್ರಯತ್ನಿಸಿದ್ದಾನೆ. ಆದರೆ ಈತನ ಪತ್ನಿ ನಿಜವಾಗಿಗೂ ಪತಿ ಮೃತಪಟ್ಟಿದ್ದಾನೆ ಎಂದು ನೊಂದು ಮಕ್ಕಳೊಂದಿಗೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಪ್ರಕರಣ?
ವ್ಯಕ್ತಿಯೊಬ್ಬ 2018ರ ಸೆಪ್ಟೆಂಬರ್ ನಲ್ಲಿ ಒಂದು ಕೋಟಿ ರೂಪಾಯಿಯ ಇನ್ಶುರೆನ್ಸ್ ಪಾಲಿಸಿಯನ್ನು ತೆಗೆದುಕೊಂಡಿದ್ದನು. ಆ ವಿಚಾರವನ್ನ ಆತ ತನ್ನ ಪತ್ನಿಗೂ ತಿಳಿಸಿರಲಿಲ್ಲ. ಸಂಸಾರದಲ್ಲಿ ಆರ್ಥಿಕವಾಗಿ ಕಷ್ಟ ಅನುಭವಿಸುತ್ತಿದ್ದನು. ಇದರಿಂದ ಬೇಸತ್ತ ಆತ ಇನ್ಶುರೆನ್ಸ್ ಹಣ ಪಡೆದುಕೊಳ್ಳಲು ಒಂದು ಪ್ಲಾನ್ ಮಾಡಿದ್ದಾನೆ.

ತಾನು ಮೃತಪಟ್ಟಂತೆ ನಾಟಕ ಮಾಡಿ ಇನ್ಶುರೆನ್ಸ್ ಹಣವನ್ನು ತೆಗೆದುಕೊಳ್ಳುವುದು ಆತನ ಪ್ಲಾನ್ ಆಗಿತ್ತು. ಅದೇ ಪ್ರಕಾರ ಅವನು ತನ್ನ ಸಹೋದ್ಯೋಗಿಗಳಿಂದ ಒಂದು ಕಾರನ್ನು ಬಾಡಿಗೆಗೆ ಪಡೆದುಕೊಂಡು ನೀರಿನಲ್ಲಿ ಮುಳುಗಿಸಿದ್ದಾನೆ. ಆ ಮೂಲಕ ತಾನು ಮೃತಪಟ್ಟಂತೆ ಸಂದರ್ಭ ಸೃಷ್ಟಿಮಾಡಿದ್ದಾನೆ. ಇದರಿಂದಾಗಿ ಇನ್ಶುರೆನ್ಸ್ ಹಣ ತನ್ನ ಕುಟುಂಬದ ಕೈಸೇರುತ್ತೆ ಅಂತ ಅಂದುಕೊಂಡಿದ್ದನು. ಆದರೆ ಅಲ್ಲಿ ಆಗಿದ್ದೆ ಬೇರೆ.

 

ಇತ್ತ ಪತಿಯ ಸಾವಿನ ಸುದ್ದಿ ತಿಳಿದ 31 ವರ್ಷದ ಡೈ ಗುಹಾವ್ ಖಿತ್ತನೆಗೆ ಒಳಗಾಗಿದ್ದು, ಪತಿ ಇಲ್ಲದೇ ತನ್ನ ಇಬ್ಬರು ಮಕ್ಕಳನ್ನು ಹೇಗೆ ಸಾಕುವುದು ಎಂದು ಚಿಂತಿಸಿದ್ದಾರೆ. ಹೀಗೆ ತನ್ನ ಮುಂದಿನ ಜೀವನವನ್ನು ನೆನೆದು, ಪರಿಸ್ಥಿತಿಯ ಬಗ್ಗೆ ಒಂದು ಸುದೀರ್ಘ ಪತ್ರವೊಂದನ್ನು ಬರೆದು ತನ್ನಿಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿ ಸಮೀಪದ ಕೊಳವೊಂದಕ್ಕೆ ಮಕ್ಕಳೊಂದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮರುದಿನ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ತಿಳಿದ ಪತಿ ತನ್ನ ತಪ್ಪಿನ ಅರಿವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಸದ್ಯಕ್ಕೆ ಪತ್ನಿ ಮತ್ತು ಮಕ್ಕಳ ಸಾವಿಗೆ ಕಾರಣನಾದ ವ್ಯಕ್ತಿ ವಿರುದ್ಧ ಪೊಲೀಸರು ವಂಚನೆ ಮತ್ತು ಆಸ್ತಿ ಹಾನಿಯ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago