ನವದೆಹಲಿ : ಇನ್ಶೂರೆನ್ಸ್ ಏಜೆಂಟ್ನ ಶವ ಚರಂಡಿಯಲ್ಲಿ ಪತ್ತೆಯಾಗಿರುವ ಘಟನೆ ಫರೀದಾಬಾದ್ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ಆಕೆಯ ಫಿಯಾನ್ಸಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಚಂದರ್ ತನ್ನನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಾರಣ ಆತನನ್ನು ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಶವ ಪತ್ತೆಯಾಗಿತ್ತು. ಸಮೀಪದಲ್ಲಿ ನಿಲ್ಲಿಸಿದ್ದ ಬೈಕ್ನ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಶವವನ್ನು ಗುರುತಿಸಲಾಯಿತು. ಫರಿದಾಬಾದ್ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂಬುದು ತಿಳಿದುಬಂದಿದೆ.
ಅವರ ಕುಟುಂಬವನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಮೃತದೇಹದ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದವು. ಚಂದರ್ ಅವರ ಸಹೋದರ ಮದನ್ ಗೋಪಾಲ್ ನೀಡಿದ ದೂರಿನ ನಂತರ, ಕೊಲೆ ಪ್ರಕರಣ ದಾಖಲಿಸಲಾಯಿತು.
ತನಿಖೆಯ ಸಮಯದಲ್ಲಿ, ಪೊಲೀಸರು ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿಸಿದ್ದಾರೆ. ಲಕ್ಷ್ಮಿ ಪೊಲೀಸರಿಗೆ ಚಂದರ್ ತನಗೆ ಐದು ವರ್ಷಗಳಿಂದ ಪರಿಚಯವಿರುವುದಾಗಿ ಹೇಳಿದ್ದಾಳೆ. ಇತ್ತೀಚೆಗೆ ಕೇಶವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ಚಂದರ್ ಬೇಸರಗೊಂಡಿದ್ದ, ಅವನು ಲಕ್ಷ್ಮಿಯನ್ನು ಬ್ಲಾಕ್ ಮೇಲ್ ಮಾಡಿ ಕೇಶವ್ ಅವರನ್ನು ಮದುವೆಯಾಗಬೇಡ ಎಂದು ಹೇಳಿದ್ದ.
ಈ ಬ್ಲ್ಯಾಕ್ ಮೇಲ್ನಿಂದ ಬೇಸತ್ತ ಆಕೆ ಮತ್ತು ಕೇಶವ್ ಜತೆ ಸೇರಿ ಚಂದರ್ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದಳು ಎಂದು ಪೊಲೀಸ್ ವಕ್ತಾರ ಯಶ್ಪಾಲ್ ಸಿಂಗ್ ತಿಳಿಸಿದ್ದಾರೆ. ಅಕ್ಟೋಬರ್ 25 ರಂದು, ಲಕ್ಷ್ಮಿ ಚಂದರ್ ಅವರನ್ನು ದೆಹಲಿಯ ಮಿಥಾಪುರಕ್ಕೆ ಕರೆಸಿಕೊಂಡಿದ್ದಳು. ಬೈಕ್ನಲ್ಲಿ ಫರಿದಾಬಾದ್ನ ಆತ್ಮದ್ಪುರದಲ್ಲಿರುವ ನಿರ್ಜನ ಪ್ರದೇಶಕ್ಕೆ ಹೋಗಲು ಕೇಳಿಕೊಂಡರು. ಅಲ್ಲಿ, ಕೇಶವ್ ಮತ್ತು ಅವನ ಇಬ್ಬರು ಸ್ನೇಹಿತರು ಚಂದರ್ ಮೇಲೆ ಹಲ್ಲೆ ನಡೆಸಿದರು.
ಉಸಿರುಗಟ್ಟಸಿ ಕೊಂದು, ಆರೋಪಿಗಳು ಶವವನ್ನು ಚರಂಡಿಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದರು. ಆರೋಪಿಗಳು ಚಂದರ್ ಅವರ ಜೇಬಿನಿಂದ ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಆದರೆ ಬೈಕ್ನ ಸಂಖ್ಯೆ ಪೊಲೀಸರಿಗೆ ಯಾರೆಂದು ಪತ್ತೆ ಹಚ್ಚಲು ಸಹಾಯ ಮಾಡಿತ್ತು. ಅಪರಾಧದಲ್ಲಿ ಭಾಗಿಯಾಗಿರುವ ಕೇಶವ್ ಅವರ ಇಬ್ಬರು ಸಹಚರರನ್ನು ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…