Featured

ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ಸೆರೆ – vishwanews24

ಇನ್ಶೂರೆನ್ಸ್ ಹಣಕ್ಕಾಗಿ ಅಮಾಯಕನ ಹತ್ಯೆ: ಆಕ್ಸಿಡೆಂಟ್ ಎಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ಸೆರೆ

ವಿಜಯನಗರ: ಅಮಾಯಕ ವ್ಯಕ್ತಿಯೊಬ್ಬರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 5.25 ಕೋಟಿ ರೂ. ಮೊತ್ತದ ಅಪಘಾತ ವಿಮೆ ಮತ್ತು ಇತರ ವಿಮೆ ಪಾಲಿಸಿಗಳನ್ನು ಮಾಡಿಸಿ, ವಿಮೆ ಮೊತ್ತ ಪಡೆಯುವ ದುರುದ್ದೇಶದಿಂದ ಆತನನ್ನು ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿರುವ ಬೆಚ್ಚಿ ಬೀಳಿಸುವ ಪ್ರಕರಣವೊಂದು ವಿಜಯನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೌಲ್ ಪೇಟೆ ನಿವಾಸಿ ಕೆ.ಗಂಗಾಧರ ಕೊಲೆಯಾದವರು. ರಿಯಾಝ್, ರಿವಿ ಯಾನೆ ರವಿ ಗೋಸಂಗಿ, ಅಜೇಯ್ ಯಾನೆ ಅಡ್ಡಿ, ಕೃಷ್ಣಪ್ಪ, ಆರ್.ವೈ ಯೋಗರಾಜ್ ಸಿಂಗ್ ಮತ್ತು ಹುಲಿಗೆಮ್ಮ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ತಿಳಿಸಿದ್ದಾರೆ.

ನಗರದ ಕೌಲ್ಪೇಟೆ ನಿವಾಸಿ ಕೆ.ಗಂಗಾಧರ ಅವರ ಮೃತದೇಹ ಸೆ.28ರಂದು ಎಚ್.ಎಲ್.ಸಿ. ಕಾಲುವೆ ಬಳಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪತಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಗಂಗಾಧರ್ ರ ಪತ್ನಿ ಕೆ.ಶಾರದಮ್ಮ ಪಟ್ಟಣದ ಠಾಣೆಗೆ ದೂರು ನೀಡಿದ್ದರು. ತನ್ನ ಪತಿಗೆ ಸ್ಟ್ರೋಕ್ ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿದ್ದು, ಅವರಿಗೆ ದ್ವಿಚಕ್ರ ವಾಹನ ಚಲಾಯಿಸಲು ಬರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆಗೆ ಮೂರು ತಂಡಗಳನ್ನು ರಚಿಸಿದ್ದರು. ತನಿಖೆ ನಡೆಸಿದ ಪೊಲೀಸರು ಹಣದ ಆಮಿಷಕ್ಕೆ ಒಳಗಾಗಿ ಅಮಾಯಕನನ್ನು ಕೊಲೆಗೈದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಜಾಲದ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಗಂಗಾಧರ್ ತೀವ್ರ ಅನಾರೋಗ್ಯ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಅವರ ಅನಾರೋಗ್ಯದ ಲಾಭ ಪಡೆಯಲು ಆರೋಪಿಗಳು ಸಂಚು ರೂಪಿಸಿದ್ದರು. ಗಂಗಾಧರರಿಗೆ ವಿವಾಹವಾಗಿದ್ದರೂ ನಗರದ ಹೋಟೇಲ್ ವೊಂದರಲ್ಲಿ ಪಾತ್ರೆ ತೊಳೆಯುವ ಕೆಲಸ ಮಾಡುತ್ತಿದ್ದ ಮಹಿಳೆ ಹುಲಿಗೆಮ್ಮಳಿಗೆ 3 ಲಕ್ಷ ರೂ. ನೀಡಿ ಗಂಗಾಧರ ಅವರ ಪತ್ನಿ ಎಂದು ನಮೂದಿಸಿ ಉಪ ನೋಂದಣಿ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿದ್ದರು. ಅಲ್ಲದೇ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೃತ ಗಂಗಾಧರನ ಹೆಸರಿನಲ್ಲಿ ಬ್ಯಾಂಕ್ ಖಾತೆ ಕೂಡಾ ತೆರೆದಿದ್ದರು. ಬಳಿಕ ಪಾನ್ ಕಾರ್ಡ್ ಮಾಡಿಸಿ, ಆದಾಯ ತೆರಿಗೆ ಪಾವತಿಸಿದ್ದರು. ಗಂಗಾಧರ ಹೆಸರಿನಲ್ಲಿ ವಿವಿಧ ಇನ್ಸೂರೆನ್ಸ್ ಕಂಪೆನಿಗಳಲ್ಲಿ 5.25 ಕೋಟಿ ರೂ. ಮೊತ್ತದ ಅಪಘಾತ ವಿಮೆ, ಇತರ ವಿಮೆಯ ಆರು ಪಾಲಿಸಿಗಳನ್ನು ಮಾಡಿಸಿದ್ದರು. ತಾವೇ ಪ್ರೀಮಿಯಂ ಹಣ ತುಂಬಿ, ಆ ಇನ್ಸೂರೆನ್ಸ್ ಗಳಿಗೆ ನಕಲಿ ನಾಮಿನಿ ರಿಜಿಸ್ಟರ್ ಮಾಡಿಸಿ, ಬ್ಯಾಂಕ್ ಖಾತೆಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದರು.

ಈ ಮಧ್ಯೆ ಗಂಗಾಧರ ಅನಾರೋಗ್ಯದಿಂದ ಮೃತಪಟ್ಟರೆ ಬೇಗ ವಿಮೆ ಕ್ಲೈಮ್ ಮಾಡುವುದು ಸುಲಭವಲ್ಲ, ಕೆಲ ಪಾಲಿಸಿಗಳು ತಿರಸ್ಕೃತಗೊಳ್ಳುತ್ತವೆ ಎಂಬುದನ್ನು ಮನಗಂಡ ದುಷ್ಕರ್ಮಿಗಳು ಅಪಘಾತ ವಿಮೆ ಪಾಲಿಸಿಯ ಹಣವನ್ನು ಪಡೆಯಲು ವ್ಯಕ್ತಿಯನ್ನು ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಿದ್ದರು. ಆದರೆ ಅನಾರೋಗ್ಯ ಕಾರಣ ಗಂಗಾಧರರಿಗೆ ದ್ವಿಚಕ್ರ ವಾಹನ ಚಲಾಯಿಸಲಾಗುತ್ತಿರಲಿಲ್ಲ ಎಂಬುದು ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದೆ.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

3 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

6 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

6 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

7 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

7 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

7 hours ago