ಸುರತ್ಕಲ್ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನನ್ನು ಹುಡುಕಿಕೊಂಡು ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿಗೆ ಆಗಮಿಸಿದ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಪ್ರಸ್ತುತ ಚೆನ್ನೈನಲ್ಲಿ ಎಂಬಿಬಿಎಸ್ ದ್ವಿತೀಯ ವರ್ಷ ಓದುತ್ತಿರುವ ವಿದ್ಯಾರ್ಥಿನಿ ರೇಶು ಎಂಬಾಕೆ ಓಡಿ ಬಂದ ವಿಧ್ಯಾರ್ಥಿನಿ.
ಯುವಕನ ಹುಡುಕಿಕೊಂಡು ಚೆನ್ನೈ ನಿಂದ ರೇಶು ಸುರತ್ಕಲ್ ಗೆ ತಲುಪಿದ್ದಾಳೆ, ಇಲ್ಲಿಗೆ ಬರುವಾಗ ಬ್ಯಾಗ್, ಮೊಬೈಲ್ ಕಳವಾಗಿದೆ. ಇದರಿಂದ ಆಕೆಗೆ ದಿಕ್ಕು ತೋಚದಂತೆ ಆಗಿ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ನಿಂತು ತನ್ನಲ್ಲಿದ್ದ ಚಿನ್ನ ಮಾರಾಟ ಮಾಡಲು ಯೋಚಿಸಿ ಅಂಗಡಿ ಬಗ್ಗೆ ಸ್ಥಳೀಯರಲ್ಲಿ ವಿಚಾರಿಸಿದ್ದಾಳೆ.
ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ,ಕೇಶವ ,ನಾಗೇಶ್ ಕಾನಾ ಅವರು ವಿಚಾರಿಸಿದಾಗ ದಾರಿ ತಪ್ಪಿ ಬಂದಿರುವ ಶಂಕೆ ವ್ಯಕ್ತವಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾದರು.
ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ಸ್ಥಳೀಯ ಸಂಸ್ಥೆಯ ಎಂಜಿನಿಯರ್ ವಿದ್ಯಾರ್ಥಿಗೆ ಪರಿಚಯವಿಲ್ಲ ಎಂಬುದು ತಿಳಿದು ಬಂತು.ಈ ಹಿಂದೆಯೂ ಇದೇ ರೀತಿ ಮನೆ ಬಿಟ್ಟು ಹೋದ ಬಗ್ಗೆ ಮಾಹಿತಿ ತಿಳಿದು ಬಂದಿದೆ.
BREAKING 🔥ಸುರತ್ಕಲ್ ಟೋಲ್ಗೇಟ್ ವಿವಾದ.. ಹೋರಾಟಗಾರರ ಮೇಲೆ FIR ದಾಖಲು – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…