ಸುರತ್ಕಲ್ : ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನನ್ನು ಹುಡುಕಿಕೊಂಡು ಎಂಬಿಬಿಎಸ್ ವಿಧ್ಯಾರ್ಥಿನಿಯೊಬ್ಬಳು ಮಂಗಳೂರಿಗೆ ಆಗಮಿಸಿದ ಘಟನೆ ನಡೆದಿದೆ. ರಾಜಸ್ಥಾನ ಮೂಲದ ಪ್ರಸ್ತುತ ಚೆನ್ನೈನಲ್ಲಿ ಎಂಬಿಬಿಎಸ್ ದ್ವಿತೀಯ ವರ್ಷ ಓದುತ್ತಿರುವ ವಿದ್ಯಾರ್ಥಿನಿ ರೇಶು ಎಂಬಾಕೆ ಓಡಿ ಬಂದ ವಿಧ್ಯಾರ್ಥಿನಿ.
ಯುವಕನ ಹುಡುಕಿಕೊಂಡು ಚೆನ್ನೈ ನಿಂದ ರೇಶು ಸುರತ್ಕಲ್ ಗೆ ತಲುಪಿದ್ದಾಳೆ, ಇಲ್ಲಿಗೆ ಬರುವಾಗ ಬ್ಯಾಗ್, ಮೊಬೈಲ್ ಕಳವಾಗಿದೆ. ಇದರಿಂದ ಆಕೆಗೆ ದಿಕ್ಕು ತೋಚದಂತೆ ಆಗಿ ಸುರತ್ಕಲ್ನ ಕಾಂತೇರಿ ದೈವಸ್ಥಾನದ ಬಳಿ ನಿಂತು ತನ್ನಲ್ಲಿದ್ದ ಚಿನ್ನ ಮಾರಾಟ ಮಾಡಲು ಯೋಚಿಸಿ ಅಂಗಡಿ ಬಗ್ಗೆ ಸ್ಥಳೀಯರಲ್ಲಿ ವಿಚಾರಿಸಿದ್ದಾಳೆ.
ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ,ಕೇಶವ ,ನಾಗೇಶ್ ಕಾನಾ ಅವರು ವಿಚಾರಿಸಿದಾಗ ದಾರಿ ತಪ್ಪಿ ಬಂದಿರುವ ಶಂಕೆ ವ್ಯಕ್ತವಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾದರು.
ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ಸ್ಥಳೀಯ ಸಂಸ್ಥೆಯ ಎಂಜಿನಿಯರ್ ವಿದ್ಯಾರ್ಥಿಗೆ ಪರಿಚಯವಿಲ್ಲ ಎಂಬುದು ತಿಳಿದು ಬಂತು.ಈ ಹಿಂದೆಯೂ ಇದೇ ರೀತಿ ಮನೆ ಬಿಟ್ಟು ಹೋದ ಬಗ್ಗೆ ಮಾಹಿತಿ ತಿಳಿದು ಬಂದಿದೆ.
BREAKING 🔥ಸುರತ್ಕಲ್ ಟೋಲ್ಗೇಟ್ ವಿವಾದ.. ಹೋರಾಟಗಾರರ ಮೇಲೆ FIR ದಾಖಲು – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…