ಬೆಳಗಾವಿ, : ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುತ್ತ ಹುಟ್ಟಿದ ಪ್ರೀತಿಗೆ ಸ್ವತಃ ಊರನ್ನು, ಅಪ್ಪ-ಅಮ್ಮನನ್ನು ಬಿಟ್ಟು ಮೈಸೂರಿನಿಂದ ಬೆಳಗಾವಿಗೆ ಬಂದು ಮದುವೆಯಾಗಿ ಗರ್ಭಿಣಿಯೂ ಆಗಿದ್ದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಸದ್ಯ ನೇಣು ಬಿಗಿದ ಸ್ಥಿತಿಯಲ್ಲಿ ನೆಲದ ಮೇಲೆ ಮಲಗಿರುವಂತೆ ಮಹಿಳೆ ಶವ ಪತ್ತೆಯಾಗಿದ್ದು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಮತ್ತೊಂದೆಡೆ ಮಹಿಳೆ ಕುಟುಂಬಸ್ಥರು ಗಂಡ ಹಾಗೂ ಆತನ ಕುಟುಂಬಸ್ಥರ ಮೇಲೆ ಕೊಲೆ ಆರೋಪ ಮಾಡಿದ್ದು ಹುಡುಕಾಟ ನಡೆಯುತ್ತಿದೆ.
ಮೈಸೂರಿನ ಕುಂಬಾರಕೊಪ್ಪಲಿನ ಮಂಜುಳಾ ಅಲಿಯಾಸ್ ನಯನಾ(23) ಎಂಬ ಯುವತಿಗೂ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ನಿವಾಸಿಯಾಗಿರುವ ಬೋರೇಶ್ ಎಂಬ ಯುವಕನಿಗೂ ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುವ ಮೂಲಕ ಪರಿಚಯವಾಗಿತ್ತು. ಈ ಪರಿಚಯ ಸ್ನೇಹವಾಗಿ ಇಬ್ಬರಲ್ಲೂ ಪ್ರೀತಿ ಹುಟ್ಟಿತ್ತು. ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ರು. ಹೀಗಾಗಿ ಮಂಜುಳಾ ತನ್ನ ಊರು, ಮನೆ ಎಲ್ಲವನ್ನೂ ಬಿಟ್ಟು ಬೆಳಗಾವಿಗೆ ಬಂದು ಬೋರೇಶ್ ಜೊತೆ ಮದುವೆಯಾಗುತ್ತಾಳೆ. ಈ ವಿಚಾರ ತಿಳಿಯುತ್ತಿದ್ದಂತೆ ಯುವತಿ ಕುಟುಂಬಸ್ಥರು ಬೆಳಗಾವಿಗೆ ಧಾವಿಸಿ ಮಗಳನ್ನು ಮತ್ತೆ ಮೈಸೂರಿಗೆ ಕರೆದುಕೊಂಡು ಹೋಗುತ್ತಾರೆ.
ಆದರೆ ಮತ್ತೆ ಮಂಜುಳಾ ಮನೆ ಬಿಟ್ಟು ಓಡಿ ಬಂದು ಗಂಡನ ಜೊತೆ ಜೀವನ ಮಾಡುತ್ತಾಳೆ. ಇದರಿಂದ ನೊಂದ ಯುವತಿ ಕುಟುಂಬ ಮದುವೆಯಾಗಿದೆ ಸಂಸಾರ ಮಾಡಿಕೊಂಡು ಖುಷಿಯಾಗಿ ಇರಲಿ ಎಂದು ಮಗಳನ್ನು ಬಿಟ್ಟುಬಿಡುತ್ತಾರೆ. ಒಂದು ವರ್ಷ ಸುಖವಾಗಿದ್ದ ಈ ಸಂಸಾರದಲ್ಲಿ ಇತ್ತೀಚೆಗೆ ಬಿರುಕು ಬಿಟ್ಟಿದೆ. 1 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಮಂಜುಳಾ 3 ತಿಂಗಳ ಗರ್ಭಿಣಿಯಾಗಿದ್ದು ಇದು ಗಂಡನಿಗೆ ಇಷ್ಟವಿರಲಿಲ್ಲ. ಮಂಜುಳಾಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಗಂಡ ಹಾಗೂ ಆತನ ಕುಟುಂಬಸ್ಥರು ಒತ್ತಡ ಹೇರಿದ್ದರು. ಈ ಬಗ್ಗೆ ಮಂಜುಳಾ ತನ್ನ ಚಿಕ್ಕಮ್ಮನ ಬಳಿ ಅಳಲು ತೋಡಿಕೊಂಡಿದ್ದಳು. ಆದರೆ ಈಗ ಮಂಜುಳಾ ಶವವಾಗಿ ಪತ್ತೆಯಾಗಿದ್ದಾಳೆ.
ಬೆಳಗಾವಿ ಹೊರವಲಯದ ಮಚ್ಚೆ ಗ್ರಾಮದಲ್ಲಿ ಪತಿ ಬೋರೇಶ್ & ಕುಟುಂಬದವರು ಉಸಿರುಗಟ್ಟಿಸಿ ನಮ್ಮ ಮಗಳನ್ನು ಕೊಂದು ಪರಾರಿಯಾಗಿದ್ದಾರೆ ಎಂದು ಮಂಜುಳಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಗರ್ಭಪಾತ ಮಾಡಿಸಿಕೊಳ್ಳಲು ವಿರೋಧ ಮಾಡಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ಘಟನೆ ಸಂಬಂಧ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಮಾತನಾಡಿದ್ದು, ಮಂಜುಳಾ ಅನ್ನೋ ಹುಡುಗಿ ಮದುವೆಯಾಗಿ ಒಂದು ವರ್ಷ ಆಗಿದ್ದು 3 ತಿಂಗಳ ಗರ್ಭಿಣಿಯಾಗಿದ್ದಳು. ಮಹಿಳೆ ನೇಣು ಹಾಕಿಕೊಂಡಿದ್ದಾರೆ ಅನ್ನೋ ಮಾಹಿತಿ ಸಿಕ್ಕ ನಂತರ ಮನೆಗೆ ದೌಡಾಯಿಸಿ ಚೆಕ್ ಮಾಡಿ ಕುಟುಂಬಸ್ಥರಿಗೆ ಮಾಹಿತಿ ನೀಡಿದೆವು. ಮದುವೆಯಾದ ಬಳಿಕ ಹುಡುಗನ ಮನೆಯವರಿಂದ ತೊಂದರೆ ಆಗ್ತಿತ್ತು. ಮಾನಸಿಕ, ದೈಹಿಕ ದೌರ್ಜನ್ಯ ಮಾಡಿದ್ದಾರೆ. ಕಾನೂನು ರೀತಿಯಲ್ಲಿ ಅಪಾಧಿತರಿಗೆ ಶಿಕ್ಷೆ ಮಾಡುತ್ತೇವೆ. ಎರಡು ತಂಡಗಳನ್ನ ರಚನೆ ಮಾಡಿ ಮೃತಳ ಗಂಡ ಹಾಗೂ ಅಪರಾಧಿತರನ್ನ ಬಂಧಿಸಲಾಗುತ್ತೆ ಎಂದು ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…