Featured

ಇನ್ ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದ ರಾಕಿಂಗ್ ಸ್ಟಾರ್ ಯಶ್ -Vishwanews24

ಬೆಂಗಳೂರು : ನಟ ಯಶ್ ಈಗ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದಿದ್ದಾರೆ. ಒಂದು ಮಿಲಿಯನ್ ಗಡಿ ದಾಟುವ ಮೂಲಕ ಇನ್ಸ್ಟಾಗ್ರಾಮ್ ನಲ್ಲಿಯೂ ದಾಖಲೆ ಮಾಡಿದ್ದಾರೆ. ‘ಕೆಜಿಎಫ್’ ಸಿನಿಮಾದ ಸಮಯದಲ್ಲಿ ಇನ್ಸ್ಟಾಗ್ರಾಮ್ ಗೆ ಬಂದಿದ್ದ ಯಶ್ ಈಗ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕನ್ನಡದ ನಟ ಆಗಿದ್ದಾರೆ.

ಸ್ಟಾರ್ ಪವರ್ ಅನ್ನು ಈಗ ಸಿನಿಮಾದ ಯಶಸ್ಸು, ಅಭಿಮಾನಿ ಬಳಗದ ಜೊತೆಗೆ ಸೋಷಿಯಲ್ ಮೀಡಿಯಾದ ಹಿಂಬಾಲಕ ಮೂಲಕವೂ ಅಳೆಯಲಾಗುತ್ತದೆ. ಈಗ ರಾಕಿಂಗ್ ಸ್ಟಾರ್ ಯಶ್ ಇನ್ಸ್ಟಾಗ್ರಾಮ್ ನಲ್ಲಿ ಕನ್ನಡದ ಇತರ ನಟರಾದ ದರ್ಶನ್, ಸುದೀಪ್, ಪುನೀತ್ ರನ್ನು ಹಿಂದೆ ಹಾಕಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಯಶ್ ನಂತರ ಸ್ಥಾನದಲ್ಲಿ ನಟ ದರ್ಶನ್ 261K, ಸುದೀಪ್ 447K ಹಾಗೂ ಪುನೀತ್ ರಾಜ್ ಕುಮಾರ್ 717K ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ಫೇಸ್ ಬುಕ್ ಹಾಗೂ ಟ್ವಿಟ್ಟರ್ ಗಿಂತ ಯಶ್ ಇನ್ಸ್ಟಾಗ್ರಾಮ್ ನಲ್ಲಿ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ‘ಕೆಜಿಎಫ್’ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಆದ ಯಶ್ ಗೆ ಅದೇ ಹವಾದಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಾರೆ. ‘ಕೆಜಿಎಫ್ 2’ ಸಿನಿಮಾ ಬಂದ ಮೇಲೆ ಫಾಲೋವರ್ಸ್ ಸಂಖ್ಯೆ ಡಬಲ್ ಆದರೂ ಅಚ್ಚರಿ ಪಡಬೇಕಿಲ್ಲ.

ಯಶ್ ಇನ್ಸ್ಟಾಗ್ರಾಮ್ ನಲ್ಲಿ ಸದಾ ಸಕ್ರಿಯವಾಗಿರುತ್ತಾರೆ. ತಮ್ಮ ಸಿನಿಮಾಗಳ ಸುದ್ದಿ, ಮಗಳ ಫೋಟೋಗಳು, ಕುಟುಂಬದ ಕಾರ್ಯಕ್ರಮಗಳ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

Vishwa News 24

Recent Posts

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

40 seconds ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

16 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

31 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

3 hours ago