Featured

ಇನ್ ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದ ರಾಕಿಂಗ್ ಸ್ಟಾರ್ ಯಶ್ -Vishwanews24

ಬೆಂಗಳೂರು : ನಟ ಯಶ್ ಈಗ ಇನ್ಸ್ಟಾಗ್ರಾಮ್ ನಲ್ಲಿ 1 ಮಿಲಿಯನ್ ಫಾಲೋಹರ್ಸ್ ಪಡೆದಿದ್ದಾರೆ. ಒಂದು ಮಿಲಿಯನ್ ಗಡಿ ದಾಟುವ ಮೂಲಕ ಇನ್ಸ್ಟಾಗ್ರಾಮ್ ನಲ್ಲಿಯೂ ದಾಖಲೆ ಮಾಡಿದ್ದಾರೆ. ‘ಕೆಜಿಎಫ್’ ಸಿನಿಮಾದ ಸಮಯದಲ್ಲಿ ಇನ್ಸ್ಟಾಗ್ರಾಮ್ ಗೆ ಬಂದಿದ್ದ ಯಶ್ ಈಗ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಕನ್ನಡದ ನಟ ಆಗಿದ್ದಾರೆ.

ಸ್ಟಾರ್ ಪವರ್ ಅನ್ನು ಈಗ ಸಿನಿಮಾದ ಯಶಸ್ಸು, ಅಭಿಮಾನಿ ಬಳಗದ ಜೊತೆಗೆ ಸೋಷಿಯಲ್ ಮೀಡಿಯಾದ ಹಿಂಬಾಲಕ ಮೂಲಕವೂ ಅಳೆಯಲಾಗುತ್ತದೆ. ಈಗ ರಾಕಿಂಗ್ ಸ್ಟಾರ್ ಯಶ್ ಇನ್ಸ್ಟಾಗ್ರಾಮ್ ನಲ್ಲಿ ಕನ್ನಡದ ಇತರ ನಟರಾದ ದರ್ಶನ್, ಸುದೀಪ್, ಪುನೀತ್ ರನ್ನು ಹಿಂದೆ ಹಾಕಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಯಶ್ ನಂತರ ಸ್ಥಾನದಲ್ಲಿ ನಟ ದರ್ಶನ್ 261K, ಸುದೀಪ್ 447K ಹಾಗೂ ಪುನೀತ್ ರಾಜ್ ಕುಮಾರ್ 717K ಫಾಲೋವರ್ಸ್ ಗಳನ್ನು ಹೊಂದಿದ್ದಾರೆ.

ಫೇಸ್ ಬುಕ್ ಹಾಗೂ ಟ್ವಿಟ್ಟರ್ ಗಿಂತ ಯಶ್ ಇನ್ಸ್ಟಾಗ್ರಾಮ್ ನಲ್ಲಿ ಅಧಿಕ ಹಿಂಬಾಲಕರನ್ನು ಹೊಂದಿದ್ದಾರೆ. ‘ಕೆಜಿಎಫ್’ ಸಿನಿಮಾದಿಂದ ನ್ಯಾಷನಲ್ ಸ್ಟಾರ್ ಆದ ಯಶ್ ಗೆ ಅದೇ ಹವಾದಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಾರೆ. ‘ಕೆಜಿಎಫ್ 2’ ಸಿನಿಮಾ ಬಂದ ಮೇಲೆ ಫಾಲೋವರ್ಸ್ ಸಂಖ್ಯೆ ಡಬಲ್ ಆದರೂ ಅಚ್ಚರಿ ಪಡಬೇಕಿಲ್ಲ.

ಯಶ್ ಇನ್ಸ್ಟಾಗ್ರಾಮ್ ನಲ್ಲಿ ಸದಾ ಸಕ್ರಿಯವಾಗಿರುತ್ತಾರೆ. ತಮ್ಮ ಸಿನಿಮಾಗಳ ಸುದ್ದಿ, ಮಗಳ ಫೋಟೋಗಳು, ಕುಟುಂಬದ ಕಾರ್ಯಕ್ರಮಗಳ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago