ಉಡುಪಿ

ಇಫ್ತಾರ್ ಕೂಟದ ಬದಲಾಗಿ ಸ್ನೇಹ ಕೂಟ – ಪೇಜಾವರ ಶ್ರೀ

ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.

ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ ಶುಭಾಶಯವನ್ನು ಸಲ್ಲಿಸಿ ಫಲ, ಖರ್ಜೂರವನ್ನು ನೀಡಿದರು.

ಈ ವೇಳೇ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟವೇ ಆಗಬೇಕಿಲ್ಲ, ಸ್ನೇಹ ಕೂಟ ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ ಅವಕಾಶ ಸಿಕ್ಕಿಲ್ಲ. ಬೇರೆ ಕಾರ್ಯಕ್ರಮಗಳೆಲ್ಲಾ ಫಿಕ್ಸ್ ಆಗಿತ್ತು, ಹೀಗಾಗಿ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸ್ನೇಹ ಕೂಟ ಮಾಡುತ್ತೇವೆ. ಕ್ರೈಸ್ತರು, ಮುಸಲ್ಮಾನರನ್ನು ಈ ಸ್ನೇಹ ಕೂಟಕ್ಕೆ ಕರೆಯುತ್ತೇವೆ. ಯೋಗ್ಯ ಸಂದರ್ಭ ನೋಡಿ ಸ್ನೇಹ ಕೂಟ ಮಾಡುತ್ತೇವೆ ಎಂದು ತಿಳಿಸಿದರು.

ದೇ ವೇಳೆ ಈ ಬಾರಿಯ ಸ್ನೇಹ ಕೂಟಕ್ಕೆ ಯಾರ ವಿರೋಧವು ಇರಲಿಲ್ಲ. ಸಂಘದ ಪ್ರಮುಖರೇ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದರು. ಆದರೆ ಕಳೆದ ಬಾರಿ ಹಿಂದೂಗಳಲ್ಲೇ ಕೆಲವರು ನೀವು ಮಾಡಿದ್ದು ತಪ್ಪು ಎಂದು ಹೇಳಿದ್ದರು. ಆ ವೇಳೆ ನಮ್ಮ ಪರಮಗುರುಗಳು ಪರ್ಯಾಯ ಪೂರ್ವದಲ್ಲಿ ಹಾಜೀ ಅಬ್ದುಲ್ಲಾ ಅವರಿಂದ ಪಾದ ಪೂಜೆ ಸ್ವೀಕಾರ ಮಾಡಿದ್ದಾರೆ. ನಾವು ಅವರನ್ನು ಕರೆಸಿ ಊಟ ಹಾಕಿದರೆ ಏನು ತಪ್ಪಾಗುತ್ತದೆ ಎಂದು ಹೇಳಿದ್ದೆ ಎಂದು ತಿಳಿಸಿದರು.

ಹಿಂದೂಗಳು ಕೆಲ ಬೇಡಿಕೆ ನಡೆಸಬೇಕು, ಮುಸಲ್ಮಾನರು ನಮ್ಮ ಕೆಲ ಬೇಡಿಕೆ ನಡೆಸಬೇಕು ಹೀಗಾಗಿ ಸ್ನೇಹಕೂಟ, ಮಾತುಕತೆ ನಡೆಯುತ್ತಿದ್ದರೆ ಮತ್ತಷ್ಟು ಸಮನ್ವಯ ಬೆಳೆಯಲು ಅನುಕೂಲ, ನಮ್ಮಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ರಾಜಕಾರಣಿಗಳು ಮಾಡುವುದೆಲ್ಲಾ ಮುಸ್ಲಿಂ ತುಷ್ಟೀಕರಣಕ್ಕೆ, ಓಟಿಗಾಗಿ ಆದರೆ ನಮ್ಮದು ಹಾಗೆ ಅಲ್ಲ ಬರೀ ತುಷ್ಟೀಕರಣ ಅಲ್ಲ. ಎಲ್ಲರ ಜೊತೆ ಸೌಹಾರ್ದ ಇರಬೇಕು ಎಂದು ಹೇಳಿದರು. ಇದೇ ಸಂದರ್ಭ ಮಾತನಾಡಿದ ಮುಸ್ಲಿಂ ಮುಖಂಡ ಅನ್ಸಾರ್ ಅಹಮ್ಮದ್ ಪ್ರತಿವರ್ಷದಂತೆ ಈ ಬಾರಿಯು ರಂಜಾನ್ ದಿನದಂದು ಸ್ವಾಮೀಜಿಗೆ ಫಲ ಸಲ್ಲಿಸಿ ಆಶೀರ್ವಾದ ಪಡೆದಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago