ಉಡುಪಿ

ಇಫ್ತಾರ್ ಕೂಟದ ಬದಲಾಗಿ ಸ್ನೇಹ ಕೂಟ – ಪೇಜಾವರ ಶ್ರೀ

ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.

ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ ಶುಭಾಶಯವನ್ನು ಸಲ್ಲಿಸಿ ಫಲ, ಖರ್ಜೂರವನ್ನು ನೀಡಿದರು.

ಈ ವೇಳೇ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಸ್ವಾಮೀಜಿ ಇಫ್ತಾರ್ ಕೂಟವೇ ಆಗಬೇಕಿಲ್ಲ, ಸ್ನೇಹ ಕೂಟ ಯಾವಾಗ ಬೇಕಾದರೂ ಮಾಡಬಹುದು. ಉತ್ತರ ಭಾರತ ಪ್ರವಾಸದಲ್ಲಿದ್ದರಿಂದ ಈ ಭಾರೀ ಅವಕಾಶ ಸಿಕ್ಕಿಲ್ಲ. ಬೇರೆ ಕಾರ್ಯಕ್ರಮಗಳೆಲ್ಲಾ ಫಿಕ್ಸ್ ಆಗಿತ್ತು, ಹೀಗಾಗಿ ರಂಜಾನ್ ಸಮಯದಲ್ಲಿ ಇಫ್ತಾರ್ ಕೂಟ ಮಾಡುವುದಕ್ಕೆ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಸ್ನೇಹ ಕೂಟ ಮಾಡುತ್ತೇವೆ. ಕ್ರೈಸ್ತರು, ಮುಸಲ್ಮಾನರನ್ನು ಈ ಸ್ನೇಹ ಕೂಟಕ್ಕೆ ಕರೆಯುತ್ತೇವೆ. ಯೋಗ್ಯ ಸಂದರ್ಭ ನೋಡಿ ಸ್ನೇಹ ಕೂಟ ಮಾಡುತ್ತೇವೆ ಎಂದು ತಿಳಿಸಿದರು.

ದೇ ವೇಳೆ ಈ ಬಾರಿಯ ಸ್ನೇಹ ಕೂಟಕ್ಕೆ ಯಾರ ವಿರೋಧವು ಇರಲಿಲ್ಲ. ಸಂಘದ ಪ್ರಮುಖರೇ ನಮ್ಮ ವಿರೋಧವಿಲ್ಲ ಎಂದು ಹೇಳಿದ್ದರು. ಆದರೆ ಕಳೆದ ಬಾರಿ ಹಿಂದೂಗಳಲ್ಲೇ ಕೆಲವರು ನೀವು ಮಾಡಿದ್ದು ತಪ್ಪು ಎಂದು ಹೇಳಿದ್ದರು. ಆ ವೇಳೆ ನಮ್ಮ ಪರಮಗುರುಗಳು ಪರ್ಯಾಯ ಪೂರ್ವದಲ್ಲಿ ಹಾಜೀ ಅಬ್ದುಲ್ಲಾ ಅವರಿಂದ ಪಾದ ಪೂಜೆ ಸ್ವೀಕಾರ ಮಾಡಿದ್ದಾರೆ. ನಾವು ಅವರನ್ನು ಕರೆಸಿ ಊಟ ಹಾಕಿದರೆ ಏನು ತಪ್ಪಾಗುತ್ತದೆ ಎಂದು ಹೇಳಿದ್ದೆ ಎಂದು ತಿಳಿಸಿದರು.

ಹಿಂದೂಗಳು ಕೆಲ ಬೇಡಿಕೆ ನಡೆಸಬೇಕು, ಮುಸಲ್ಮಾನರು ನಮ್ಮ ಕೆಲ ಬೇಡಿಕೆ ನಡೆಸಬೇಕು ಹೀಗಾಗಿ ಸ್ನೇಹಕೂಟ, ಮಾತುಕತೆ ನಡೆಯುತ್ತಿದ್ದರೆ ಮತ್ತಷ್ಟು ಸಮನ್ವಯ ಬೆಳೆಯಲು ಅನುಕೂಲ, ನಮ್ಮಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ರಾಜಕಾರಣಿಗಳು ಮಾಡುವುದೆಲ್ಲಾ ಮುಸ್ಲಿಂ ತುಷ್ಟೀಕರಣಕ್ಕೆ, ಓಟಿಗಾಗಿ ಆದರೆ ನಮ್ಮದು ಹಾಗೆ ಅಲ್ಲ ಬರೀ ತುಷ್ಟೀಕರಣ ಅಲ್ಲ. ಎಲ್ಲರ ಜೊತೆ ಸೌಹಾರ್ದ ಇರಬೇಕು ಎಂದು ಹೇಳಿದರು. ಇದೇ ಸಂದರ್ಭ ಮಾತನಾಡಿದ ಮುಸ್ಲಿಂ ಮುಖಂಡ ಅನ್ಸಾರ್ ಅಹಮ್ಮದ್ ಪ್ರತಿವರ್ಷದಂತೆ ಈ ಬಾರಿಯು ರಂಜಾನ್ ದಿನದಂದು ಸ್ವಾಮೀಜಿಗೆ ಫಲ ಸಲ್ಲಿಸಿ ಆಶೀರ್ವಾದ ಪಡೆದಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago