Featured

ಇಬ್ಬರು ಆರೋಪ ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ : ರೋಹಿಣಿ – ರೂಪಗೆ ಸುಪ್ರೀಂಕೋರ್ಟ್‌ ಸಲಹೆ – Vishwanews24

ಇಬ್ಬರು ಆರೋಪ ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ : ರೋಹಿಣಿ – ರೂಪಗೆ ಸುಪ್ರೀಂಕೋರ್ಟ್‌ ಸಲಹೆ

ನವದೆಹಲಿ : ಕರ್ನಾಟಕದ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ಗಲಾಟೆ ಬಗ್ಗೆ ಸುಪ್ರೀಂಕೋರ್ಟ್ ಸಲಹೆಯನ್ನು ನೀಡಿದ್ದರೂ ಇಬ್ಬರು ಆರೋಪಗಳನ್ನು ಮಾಡುವುದನ್ನು ಬಿಟ್ಟು ಸಂಧಾನ ಮಾಡಿಕೊಳ್ಳಿ ಎಂದು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಮಂಗಳವಾರ ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.

ಐಪಿಎಸ್ ಅಧಿಕಾರಿ ರೂಪಾ ಅವರು ಮಾಡಿರುವ ಆರೋಪಿಗಳ ಮೇಲೆ ದಾಖಲಾಗಿರುವ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್‌ ಮತ್ತು ಪಂಕಜ್‌ ಮಿತ್ತಲ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಉಭಯ ಪಕ್ಷಕಾರರು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ಡಿಸೆಂಬರ್‌ 15ರಂದು ಪ್ರಕರಣಕ್ಕೆ ತಡೆ ನೀಡಿದ್ದ ಸರ್ವೋಚ್ಚ ನ್ಯಾಯಾಲಯವು ಮಾಧ್ಯಮಗಳಲ್ಲಿ ಮಾತನಾಡದಂತೆ ಉಭಯ ಅಧಿಕಾರಿಗಳಿಗೆ ನಿರ್ದೇಶಿಸಿತ್ತು. ಅಲ್ಲದೇ, ವಿವಾದ ಬಗೆಹರಿಸಿಕೊಳ್ಳಲು ಸಂಧಾನಕ್ಕೆ ಮುಂದಾಗುವಂತೆ ಸಲಹೆ ನೀಡಿತ್ತು.

ಸಿಂಧೂರಿ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ಅವರು ಸಿಂಧೂರಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಲು ಬಯಸಿಲ್ಲ. ಪರಿಹಾರ ಸಾಧ್ಯತೆಯ ಬಗ್ಗೆ ಸಿಂಧೂರಿ ಜೊತೆ ಚರ್ಚಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದರು. ಇದನ್ನು ಆಲಿಸಿದ ಪೀಠವು ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago