Featured

ಇಬ್ಬರು ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ – Vishwanews24

ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿ ಖುದ್ದು ಮಾಹಿತಿ ನೀಡಿದ ತಾಯಿ ಅರೆಸ್ಟ್‌

ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಮಂದಿ ಬೆಚ್ಚಿಬಿದ್ದಿದ್ದಾರೆ.

ಗಂಗಾ ದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಹೊತ್ತಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ.

ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಫೋನ್​ನಲ್ಲಿ ಹೇಳಿದ್ದಾರೆ. ಕೂಡಲೇ ಅಲರ್ಟ್ ಆಗಿರುವ ಕಂಟ್ರೋಲ್ ರೂಮ್​, ಸ್ಥಳಕ್ಕೆ ಹೊಯ್ಸಳ ಟೀಂ ಕಳುಹಿಸಿದೆ. ಪರಿಶೀಲನೆ ಮಾಡಿ ಗಂಗಾದೇವಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್​ನಲ್ಲಿ ಜೈಲು ಪಾಲಾಗಿದ್ದಾನೆ. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು ಎಂದು ತಿಳಿದುಬಂದಿದೆ. ಇನ್ನು, ಈ ಹಿಂದೆ ಗಂಗಾದೇವಿಯೇ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಮಕ್ಕಳ ಜೊತೆ ಅಸಭ್ಯವರ್ತನೆ ತೋರುತ್ತಾನೆಂದು ಜಾಲಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

11 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago