ಹೆತ್ತ ತಾಯಿಯೇ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಬೆಂಗಳೂರು ಮಂದಿ ಬೆಚ್ಚಿಬಿದ್ದಿದ್ದಾರೆ.
ಗಂಗಾ ದೇವಿ ಕೊಲೆ ಮಾಡಿದ ಆರೋಪಿ. 9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಹೊತ್ತಿದ್ದಾಳೆ. ಮಕ್ಕಳನ್ನು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವ ಗಂಗಾದೇವಿಯೇ ಪೊಲೀಸರಿಗೆ ಖುದ್ದು ಮಾಹಿತಿ ನೀಡಿದ್ದಾಳೆ.
ಇಬ್ಬರು ಮಕ್ಕಳನ್ನ ಕೊಲೆ ಮಾಡಿ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಗಂಗಾದೇವಿ, ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ಈಗ ನಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಫೋನ್ನಲ್ಲಿ ಹೇಳಿದ್ದಾರೆ. ಕೂಡಲೇ ಅಲರ್ಟ್ ಆಗಿರುವ ಕಂಟ್ರೋಲ್ ರೂಮ್, ಸ್ಥಳಕ್ಕೆ ಹೊಯ್ಸಳ ಟೀಂ ಕಳುಹಿಸಿದೆ. ಪರಿಶೀಲನೆ ಮಾಡಿ ಗಂಗಾದೇವಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗಂಗಾದೇವಿ ಮೂಲತಃ ಆಂಧ್ರ ಮೂಲದವಳು. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್ನಲ್ಲಿ ಜೈಲು ಪಾಲಾಗಿದ್ದಾನೆ. ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡ್ತಿದ್ದಳು ಎಂದು ತಿಳಿದುಬಂದಿದೆ. ಇನ್ನು, ಈ ಹಿಂದೆ ಗಂಗಾದೇವಿಯೇ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು. ಮಕ್ಕಳ ಜೊತೆ ಅಸಭ್ಯವರ್ತನೆ ತೋರುತ್ತಾನೆಂದು ಜಾಲಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…