ಕಾಸರಗೋಡು : ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಕಾಸರಗೋಡಿನ ಚಿಮೇನಿ ಚೆಂಬ್ರಕಾನದಲ್ಲಿ ನಡೆದಿದೆ.
ರಂಜಿತ್ ಅವರ ಪತ್ನಿ ಸಜೀನಾ (34), ಮಕ್ಕಳಾದ ಗೌತಮ್( 9), ಮತ್ತು ತೇಜಸ್ (6) ಮೃತ ದುರ್ದೈವಿಗಳಾಗಿದ್ದಾರೆ. ಇವರು ಚೆಂಬ್ರಕಾನ್ ನಿವಾಸಿಗಳೆಂದು ತಿಳಿದುಬಂದಿದೆ. ಪ್ರಿಲ್ 9ರ ಮಂಗಳವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದ್ದು ಮಕ್ಕಳು ವಿಷ ಸೇವಿಸಿ ಮೃತಪಟ್ಟಿದ್ದು, ತಾಯಿ ಸಜೀನಾ ನೇಣು ಬಿಗಿದುಕೊಂಡು ಕೈಯ ನರವನ್ನು ಕತ್ತರಿಸಿಕೊಂಡು ಸಾವನ್ನಪ್ಪಿದ್ದಾರೆ.
ಸಜೀನಾ ಪೆರಿಂಗೋ ವಯಕ್ಕರ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.ಮಾಹಿತಿ ಪಡೆದ ಚಿಮೇನಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಈ ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…