Featured

ಇಬ್ಬರೂ ಒಟ್ಟಿಗೆ ಸಾಗುವುದೇ ನಮ್ಮ ನಡುವೆ ಆಗಿರುವ ಒಪ್ಪಂದ: ಸಿದ್ದರಾಮಯ್ಯ – vishwanews24

ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ..

2028 ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ತರಲು ಕಾರ್ಯತಂತ್ರ..

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಅವರು ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಮ್ಮ ನಿವಾಸದಲ್ಲಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ. ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈಕಮಾಂಡಿಗೆ ಮಾಹಿತಿ ನೀಡಲಾಗುವುದು. ಗೊಂದಲ ಸೃಷ್ಟಿಯಾಗಿದೆ, ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿವೆ ಎಂದರು.

ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು.

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028ರ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲೂಕು, ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್‌ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ. 2022ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago