ಇರಾನ್, : ಮಧ್ಯಪ್ರಾಚ್ಯದ ಇರಾಕ್ ನಲ್ಲಿ ಭಗವಾನ್ ಶ್ರೀರಾಮನನ್ನು ಹೋಲುವ ಉಬ್ಬು ಚಿತ್ರವೊಂದು ಪತ್ತೆಯಾಗಿದೆ.
ಇರಾನ್ ನ ಹೊರೇನ್ ಶೇಖಾನ್ ಎನ್ನುವ ಪ್ರದೇಶದಲ್ಲಿ ಇರುವ ದರ್ಬಾಂದ್ ಐ ಬೇಲುಲಾ ಬಂಡೆಯಲ್ಲಿ ಈ ಉಬ್ಬುಚಿತ್ರ ಕಂಡು ಬಂದಿದೆ. ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ ಮತ್ತು ಅಯೋಧ್ಯೆಯ ಶೋಧ ಸಂಸ್ಥಾನದ ವಿನಂತಿಸಿ ಆ ಬಳಿಕ ಇರಾಕ್ನಲ್ಲಿರುವ ಭಾರತದ ರಾಯಭಾರಿ ಪ್ರದೀಪ್ ಸಿಂಗ್ ರಾಜಪುರೋಹಿತ್ ನೇತೃತ್ವದ ನಿಯೋಗ ಉಬ್ಬುಚಿತ್ರ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಈ ಉಬ್ಬುಚಿತ್ರವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿದಾಗ ರಾಮನನ್ನೇ ಹೋಲಿಕೆ ಮಾಡುವ ಕೆತ್ತನೆ ಕಂಡು ಬಂದಿರುವುದಾಗಿ ತಿಳಿಸಿದೆ.
ಈ ಕುರಿತು ಮಾತನಾಡಿರುವ ಪ್ರದೀಪ್ ಸಿಂಗ್, ಕ್ರಿಸ್ತಪೂರ್ವ 4,500 ಹಾಗೂ 1,900 ನಡುವಿನ ಸಮಯದಲ್ಲಿ ಮೆಸಪೊಟೆಮಿಯಾವನ್ನು ಸುಮೇರಿಯನ್ನರು ಆಳ್ವಿಕೆ ನಡೆಸುತ್ತಿದ್ದರು. ಬಹುಶಃ ಅವರು ಭಾರತದಿಂದ ಅಲ್ಲಿಗೆ ಹೋಗಿರಬಹುದು ಎಂದು ಕೆಲ ದಾಖಲೆಗಳು ಹೇಳುತ್ತಿವೆ. ಜೊತೆಗೆ ಅವರ ವಂಶವಾಹಿಗಳು ಸಿಂಧೂ ಕಣಿವೆ ನಾಗರಿಕತೆಯ ಕುರುಹುಗಳು ಜೊತೆಗೆ ಹೋಲಿಕೆಯಾಗುತ್ತವೆ.
ಹೀಗಾಗಿ ಭಾರತದ ಸಂಸ್ಕೃತಿ ಇಲ್ಲಿಯವರೆಗೆ ಹಬ್ಬಿರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.
ಪತ್ತೆಯಾಗಿರುವ ಆಕೃತಿಗಳು ಶ್ರೀರಾಮಚಂದ್ರ ಹಾಗೂ ಆಂಜನೇಯನಿಗೆ ಹೋಲಿಕೆಯಾಗುತ್ತಿವೆ.ಚಿತ್ರದಲ್ಲಿ ಯಾವುದೇ ಅಲಂಕಾರವಿಲ್ಲದ ರಾಜನೊಬ್ಬ ಬಿಲ್ಲು ಬಾಣಗಳನ್ನು ಹಿಡಿದು ನಿಂತಿದ್ದು, ಸೊಂಟದಲ್ಲಿ ಕತ್ತಿಯೂ ಇದೆ. ರಾಜನ ಎದುರಿಗೆ ಕೈ ಮುಗಿದು ಕುಳಿತಿರುವ ಸೇವಕನ ಚಿತ್ರವಿದ್ದು, ಇದು ಶ್ರೀರಾಮ ಹಾಗೂ ಹನುಮಂತನಾಗಿರಬಹುದು ಎಂದು ಶೋಧ ಸಂಸ್ಥಾನದ ಅಧಿಕಾರಿಗಳು ಊಹಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…