Featured

ಇರಾಕ್ ನಲ್ಲಿ ಭಗವಾನ್ ಶ್ರೀರಾಮನನ್ನು ಹೋಲುವ ಕುರುಹು ಪತ್ತೆ -Vishwanews24

ಇರಾನ್, : ಮಧ್ಯಪ್ರಾಚ್ಯದ ಇರಾಕ್ ನಲ್ಲಿ ಭಗವಾನ್ ಶ್ರೀರಾಮನನ್ನು ಹೋಲುವ ಉಬ್ಬು ಚಿತ್ರವೊಂದು ಪತ್ತೆಯಾಗಿದೆ.

ಇರಾನ್ ನ ಹೊರೇನ್ ಶೇಖಾನ್ ಎನ್ನುವ ಪ್ರದೇಶದಲ್ಲಿ ಇರುವ ದರ್ಬಾಂದ್ ಐ ಬೇಲುಲಾ ಬಂಡೆಯಲ್ಲಿ ಈ ಉಬ್ಬುಚಿತ್ರ ಕಂಡು ಬಂದಿದೆ. ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ ಮತ್ತು ಅಯೋಧ್ಯೆಯ ಶೋಧ ಸಂಸ್ಥಾನದ ವಿನಂತಿಸಿ ಆ ಬಳಿಕ ಇರಾಕ್​ನಲ್ಲಿರುವ ಭಾರತದ ರಾಯಭಾರಿ ಪ್ರದೀಪ್ ಸಿಂಗ್ ರಾಜಪುರೋಹಿತ್ ನೇತೃತ್ವದ ನಿಯೋಗ ಉಬ್ಬುಚಿತ್ರ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಈ ಉಬ್ಬುಚಿತ್ರವನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಿದಾಗ ರಾಮನನ್ನೇ ಹೋಲಿಕೆ ಮಾಡುವ ಕೆತ್ತನೆ ಕಂಡು ಬಂದಿರುವುದಾಗಿ ತಿಳಿಸಿದೆ.

ಈ ಕುರಿತು ಮಾತನಾಡಿರುವ ಪ್ರದೀಪ್ ಸಿಂಗ್, ಕ್ರಿಸ್ತಪೂರ್ವ 4,500 ಹಾಗೂ 1,900 ನಡುವಿನ ಸಮಯದಲ್ಲಿ ಮೆಸಪೊಟೆಮಿಯಾವನ್ನು ಸುಮೇರಿಯನ್ನರು ಆಳ್ವಿಕೆ ನಡೆಸುತ್ತಿದ್ದರು. ಬಹುಶಃ ಅವರು ಭಾರತದಿಂದ ಅಲ್ಲಿಗೆ ಹೋಗಿರಬಹುದು ಎಂದು ಕೆಲ ದಾಖಲೆಗಳು ಹೇಳುತ್ತಿವೆ. ಜೊತೆಗೆ ಅವರ ವಂಶವಾಹಿಗಳು ಸಿಂಧೂ ಕಣಿವೆ ನಾಗರಿಕತೆಯ ಕುರುಹುಗಳು ಜೊತೆಗೆ ಹೋಲಿಕೆಯಾಗುತ್ತವೆ.

ಹೀಗಾಗಿ ಭಾರತದ ಸಂಸ್ಕೃತಿ ಇಲ್ಲಿಯವರೆಗೆ ಹಬ್ಬಿರುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಪತ್ತೆಯಾಗಿರುವ ಆಕೃತಿಗಳು ಶ್ರೀರಾಮಚಂದ್ರ ಹಾಗೂ ಆಂಜನೇಯನಿಗೆ ಹೋಲಿಕೆಯಾಗುತ್ತಿವೆ.ಚಿತ್ರದಲ್ಲಿ ಯಾವುದೇ ಅಲಂಕಾರವಿಲ್ಲದ ರಾಜನೊಬ್ಬ ಬಿಲ್ಲು ಬಾಣಗಳನ್ನು ಹಿಡಿದು ನಿಂತಿದ್ದು, ಸೊಂಟದಲ್ಲಿ ಕತ್ತಿಯೂ ಇದೆ. ರಾಜನ ಎದುರಿಗೆ ಕೈ ಮುಗಿದು ಕುಳಿತಿರುವ ಸೇವಕನ ಚಿತ್ರವಿದ್ದು, ಇದು ಶ್ರೀರಾಮ ಹಾಗೂ ಹನುಮಂತನಾಗಿರಬಹುದು ಎಂದು ಶೋಧ ಸಂಸ್ಥಾನದ ಅಧಿಕಾರಿಗಳು ಊಹಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago