ಇರಾಕ್: ವಿವಾಹ ಸಮಾರಂಭ ನಡೆಯುತ್ತಿದ್ದ ಸಭಾಂಗಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 114ಮಂದಿ ಸಜೀವ ದಹನಗೊಂಡು 150ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರ ಇರಾಕ್ ನಲ್ಲಿ ಸಂಭವಿಸಿದೆ.
ಇದು ಪ್ರಧಾನವಾಗಿ ಕ್ರಿಶ್ಚಿಯನ್ ಸಮುದಾಯವೇ ಹೆಚ್ಚಾಗಿ ನೆಲೆಸಿರುವ ಪ್ರದೇಶವಾಗಿದ್ದು, ರಾಜಧಾನಿ ಬಾಗ್ದಾದ್ನ ವಾಯುವ್ಯಕ್ಕೆ ಸುಮಾರು 335 ಕಿಲೋಮೀಟರ್ ದೂರದಲ್ಲಿನ ಪ್ರದೇಶವಾಗಿದೆ. ಮಂಗಳವಾರ ರಾತ್ರಿ ಸ್ಥಳೀಯ ಕಾಲಮಾನ ಸುಮಾರು 10:45ಕ್ಕೆ (19:45 GMT) ಈ ಅನಾಹುತ ಸಂಭವಿಸಿದೆ.
ಮದುವೆ ಸಮಾರಂಭ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಪರಿಣಾಮ ಬೆಂಕಿ ಹಾಲ್ ನಲ್ಲಿರುವ ಪರದೆಗಳಿಗೆ ಆವರಿಸಿಕೊಂಡು ಇಡೀ ಸಭಾಂಗಣವನ್ನು ಆವರಿಸಿಕೊಂಡು ಸಮಾರಂಭದಲ್ಲಿ ಭಾಗಿಯಾಗಿದ್ದವರು ಗಾಬರಿಯಿಂದ ಹೊರ ಓಡಿ ಬರುವಾಗ ನೂಕುನುಗ್ಗಲು ಸಂಭವಿಸಿ ಬೆಂಕಿಗೆ ಆಹುತಿಯಾಗಿದ್ದಾರೆ.
ಬೆಂಕಿ ಅವಘಡಕ್ಕೆ ಯಾವುದೇ ಅಧಿಕೃತ ಕಾರಣ ಪತ್ತೆಯಾಗದಿದ್ದರೂ, ಆಚರಣೆಯ ಸಂದರ್ಭದಲ್ಲಿ ಬಳಸಿದ ಪಟಾಕಿಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ ಎಂದು ಇರಾಕ್ನ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ.
ಘಟನೆ ಸಂಭವಿಸಿದ ಕೂಡಲೇ ಅಡುಗೆಗೆ ಬಳಸಿದ್ದ ಹೆಚ್ಚಿನ ಗ್ಯಾಸ್ ಸಿಲಿಂಡರ್ ಗಳನ್ನು ಹೊರ ಹಾಕಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಗ್ಯ ಸಚಿವಾಲಯದ ವಕ್ತಾರ ಸೈಫ್ ಅಲ್-ಬದರ್ ಅವರು ಸರ್ಕಾರಿ ಇರಾಕಿ ನ್ಯೂಸ್ ಏಜೆನ್ಸಿ ಮೂಲಕ ಅಪಘಾತದ ಅಂಕಿಅಂಶವನ್ನು ನೀಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…