ಟೆಹರಾನ್: ದಕ್ಷಿಣ ಇರಾನ್ನ ಪ್ರಮುಖ ಶಿಯಾ ಮುಸ್ಲಿಂ ಮಸೀದಿ ಮೇಲೆ ಬುಧವಾರ ಉಗ್ರರು ಭೀಕರು ದಾಳಿ ನಡೆಸಿದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿ, ೪೦ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಶಿರಾಜ್ ನಗರದ ಶಾ ಚೆರಾಗ್ ನಲ್ಲಿ ಸಂಜೆಯ ಪ್ರಾರ್ಥನೆಯ ಸಮಯದಲ್ಲಿ ನುಗ್ಗಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದ್ದಾರೆ.
ಇರಾನಿನ ಮಾಧ್ಯಮಗಳು ಮಸೀದಿಯೊಳಗೆ ರಕ್ತಸಿಕ್ತ ದೇಹಗಳನ್ನು ಬಟ್ಟೆಯಿಂದ ಮುಚ್ಚಿರುವುದನ್ನು ತೋರಿಸುವ ಚಿತ್ರಗಳನ್ನು ಮತ್ತು ವೀಡಿಯೊ ತುಣುಕನ್ನು ಪ್ರಕಟಿಸಿವೆ. ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಗುಂಪು ಹೊತ್ತುಕೊಂಡಿದೆ.
ಕೆಲವು ಸ್ಥಳೀಯ ಮಾಧ್ಯಮಗಳು ಮೂವರು ದಾಳಿಕೋರರು ಭಾಗಿಯಾಗಿದ್ದಾರೆ ಎಂದು ವರದಿ ಮಾಡಿದೆ.
ಸ್ಥಳೀಯ ಪೊಲೀಶ್ ಮುಖ್ಯಸ್ಥ ಕಜೆಮ್ ಮೌಸವಿ ರಾಜ್ಯ ದೂರದರ್ಶನಕ್ಕೆ “ಈ ದಾಳಿಯಲ್ಲಿ ಒಬ್ಬ ಭಯೋತ್ಪಾದಕ ಮಾತ್ರ ಭಾಗಿಯಾಗಿದ್ದಾನೆ” ಎಂದು ಹೇಳಿದ್ದಾರೆ
ಶಾ ಚೆರಾಗ್ ಸಮಾಧಿಯು ಎಂಟನೇ ಶಿಯಾ ಇಮಾಮ್ ಇಮಾಮ್ ರೆಜಾ ಅವರ ಸಹೋದರ ಅಹ್ಮದ್ ಅವರ ಸಮಾಧಿಗೆ ನೆಲೆಯಾಗಿದೆ ಮತ್ತು ಇದನ್ನು ದಕ್ಷಿಣ ಇರಾನ್ನ ಅತ್ಯಂತ ಪವಿತ್ರ ಸ್ಥಳವೆಂದು ಪರಿಗಣಿಸಲಾಗಿದೆ.
ಮಂಗಳೂರು : ಫೂಡ್ ಪಾಯ್ಸನ್ – ಒಂದೇ ಕುಟುಂಬದ ನಾಲ್ವರು ಅಸ್ವಸ್ಥ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…