ಬೆಂಗಳೂರು: “ಜೀವನದಲ್ಲಿ ನಾನು ಒಂದು ಬಾರಿ ತಪ್ಪು ಮಾಡಿದ್ದು, ಆ ತಪ್ಪನ್ನು ಈಗಾಗಲೇ ಧೈರ್ಯವಾಗಿ ಒಪ್ಪಿಕೊಂಡಿದ್ದೇನೆ. ಅದರೂ ಸಚಿವರಾಗಿ ಸುಧಾಕರ್ ಇಂತಹ ಹೇಳಿಕೆ ಕೊಡಬಾರದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಿಡಿ ಕೇಸ್ ವಿಚಾರವಾಗಿ ಮಾತನಾಡಿದ್ದ ಸಚಿವ ಡಾ. ಕೆ. ಸುಧಾಕರ್ , “ಯಾವ್ಯಾವ ಮುಖ್ಯಮಂತ್ರಿಗಳು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು, . ಡಿಕೆಶಿ, ಕುಮಾರಸ್ವಾಮಿ, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರೇ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಯಾರು ಎಂಥವರು ಎಂಬ ಸತ್ಯ ಜನರಿಗೆ ಗೊತ್ತಾಗಲಿ” ಎಂದು ಹೇಳಿದ್ದರು.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಚ್.ಡಿ.ಕೆ, “ಇಲ್ಲಿ ಯಾರು ಸತ್ಯ ಹರಿಶ್ಚಂದ್ರರು ಅಲ್ಲ, ನನ್ನ ಹೆಸರನ್ನು ಅವರು ಇಲ್ಲಿ ಯಾಕೆ ತಂದರು? ನಾನು ಮಾಡಿದ ತಪ್ಪನ್ನು ಧೈರ್ಯವಾಗಿ ಒಪ್ಪಿಕೊಂಡಿದ್ದೇನೆ. ಇದೇ ವಿಚಾರವನ್ನು ಸದನದಲ್ಲೂ ತಿಳಿಸಿದ್ದೇನೆ. ನಾನು ಒಂದು ಬಾರಿ ಜೀವನದಲ್ಲಿ ತಪ್ಪು ಮಾಡಿದ್ದೇನೆ. ಇಲ್ಲಿ ಎಲ್ಲರ ಮನೆಯ ದೋಸೆಯೂ ತೂತೆ. ಇದೆಲ್ಲದನ್ನು ಬಿಟ್ಟು ರಾಜ್ಯದ ಜನರ ಮೇಲೆ ನಮ್ಮ ದೃಷ್ಟಿ ಇರಲಿ , ಇಲ್ಲಿ ನನ್ನ ಹೆಸರು ಯಾಕೆ ಪ್ರಸ್ತಾಪಿಸಿದರೂ ಗೊತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…