ಬೆಂಗಳೂರು: “ಜೀವನದಲ್ಲಿ ನಾನು ಒಂದು ಬಾರಿ ತಪ್ಪು ಮಾಡಿದ್ದು, ಆ ತಪ್ಪನ್ನು ಈಗಾಗಲೇ ಧೈರ್ಯವಾಗಿ ಒಪ್ಪಿಕೊಂಡಿದ್ದೇನೆ. ಅದರೂ ಸಚಿವರಾಗಿ ಸುಧಾಕರ್ ಇಂತಹ ಹೇಳಿಕೆ ಕೊಡಬಾರದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸಿಡಿ ಕೇಸ್ ವಿಚಾರವಾಗಿ ಮಾತನಾಡಿದ್ದ ಸಚಿವ ಡಾ. ಕೆ. ಸುಧಾಕರ್ , “ಯಾವ್ಯಾವ ಮುಖ್ಯಮಂತ್ರಿಗಳು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು, . ಡಿಕೆಶಿ, ಕುಮಾರಸ್ವಾಮಿ, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರೇ? ಇವರೆಲ್ಲ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ಯಾರು ಎಂಥವರು ಎಂಬ ಸತ್ಯ ಜನರಿಗೆ ಗೊತ್ತಾಗಲಿ” ಎಂದು ಹೇಳಿದ್ದರು.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಚ್.ಡಿ.ಕೆ, “ಇಲ್ಲಿ ಯಾರು ಸತ್ಯ ಹರಿಶ್ಚಂದ್ರರು ಅಲ್ಲ, ನನ್ನ ಹೆಸರನ್ನು ಅವರು ಇಲ್ಲಿ ಯಾಕೆ ತಂದರು? ನಾನು ಮಾಡಿದ ತಪ್ಪನ್ನು ಧೈರ್ಯವಾಗಿ ಒಪ್ಪಿಕೊಂಡಿದ್ದೇನೆ. ಇದೇ ವಿಚಾರವನ್ನು ಸದನದಲ್ಲೂ ತಿಳಿಸಿದ್ದೇನೆ. ನಾನು ಒಂದು ಬಾರಿ ಜೀವನದಲ್ಲಿ ತಪ್ಪು ಮಾಡಿದ್ದೇನೆ. ಇಲ್ಲಿ ಎಲ್ಲರ ಮನೆಯ ದೋಸೆಯೂ ತೂತೆ. ಇದೆಲ್ಲದನ್ನು ಬಿಟ್ಟು ರಾಜ್ಯದ ಜನರ ಮೇಲೆ ನಮ್ಮ ದೃಷ್ಟಿ ಇರಲಿ , ಇಲ್ಲಿ ನನ್ನ ಹೆಸರು ಯಾಕೆ ಪ್ರಸ್ತಾಪಿಸಿದರೂ ಗೊತ್ತಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…