Featured

ಇವತ್ತಿನಿಂದ ಬಿಜೆಪಿ ಸರ್ಕಾರದ ಕೊನೆಯ ಕ್ಷಣ ಆರಂಭ : ಡಿ.ಕೆ. ಶಿ – VIshwanews24

ಇವತ್ತಿನಿಂದ ಬಿಜೆಪಿ ಸರ್ಕಾರದ ಕೊನೆಯ ಕ್ಷಣ ಆರಂಭ : ಡಿ.ಕೆ. ಶಿ

ಬೆಂಗಳೂರು : ನಾವು ಮೂರು ತಿಂಗಳು ಮೊದಲೇ ಚುನಾವಣೆಗೆ ರೆಡಿ ಇದ್ದೇವೆ, ಅವರು ಹೇಗಾದರೂ ಮಾಡಿಕೊಳ್ಳಲಿ, ಇವತ್ತಿನಿಂದ ಸರ್ಕಾರದ ಕೊನೆಯ ಕ್ಷಣ ಆರಂಭವಾಗಿದೆ. ಬಿಜೆಪಿಯವರು 60-65 ಸೀಟಿಗೆ ಬಂದು ನಿಲ್ತಾರೆ. ನಾವು ನಿಚ್ಚಳವಾದ ಬಹುಮತ ಪಡೆತ್ತೇವೆ. ಎಷ್ಟು ಬೇಗ ಚುನಾವಣೆ ಆಗತ್ತೆ ಅಷ್ಟು ಕಾಂಗ್ರೆಸ್‌ಗೆ ಒಳ್ಳೆದು ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂದು ವಿಧಾನಸಭಾ ಚುನಾವಣೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಸರ್ಕಾರ ಅಧಿಕಾರವನ್ನು ಮಿಷನರಿಯನ್ನು ಎಷ್ಟು ದುರ್ಬಳಕೆ ಮಾಡಿಕೊಳ್ಳಬೇಕೋ ಅಷ್ಟು ಮಾಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಸಮಾಧಾನ ಇಲ್ಲ. ಕೋರ್ಟ್‌ಗೆ ಹೋದರೆ ಯಾವುದೂ ನಿಲ್ಲುವುದಿಲ್ಲ. ಅವರು ಮಾಡಿದ ತಪ್ಪನ್ನು ನಾವು ಸರಿ ಮಾಡ್ತೇವೆ. ಮನೆ ಆಸ್ತಿನ ಹಂಚಿಕೊಂಡಂಗೆ ಇವರು ಕೊನೆ ಕ್ಷಣದಲ್ಲಿ ಹಂಚಿಕೊಳ್ಳಲು ಹೊರಟಿದ್ದಾರೆ ಅಂತ ಲೇವಡಿ ಮಾಡಿದ್ದಾರೆ.

ಯಾವ ಶಾಸಕರನ್ನು ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದಾರೆ. ಅವರಿಗೆ ಬಹುಮತ ಬಂದಿತ್ತಾ. ಬಿಜೆಪಿಗೆ ಹೋಗಿದ್ದು ನಮ್ಮ ಶಾಸಕರು ತಾನೇ, ಬಿಜೆಪಿಯಿಂದ ಅವರಾಗೆ ಬರುತ್ತಿದ್ದಾರೆ. ನಮಗೆ ಟಿಕೆಟ್ ಸಹ ನೀಡದಷ್ಟು ರಶ್ ಇದೆ. ಸಿಎಂ ಯಾವ ಪಕ್ಷದಲ್ಲಿ ಇದ್ದವರು, ಈಗ ಯಾವ ಪಕ್ಷಕ್ಕೆ ಬಂದು ಸಿಎಂ ಆಗಿದ್ದಾರೆ. ಸಾಕಷ್ಟು ಜನರು ನಮ್ಮ  ಸಂಪರ್ಕದಲ್ಲಿ ಇದ್ದಾರೆ. ನಾನು ಅವರ ಹೆಸರು ಹೇಳಲು ರೆಡಿ ಇಲ್ಲ. ಅವರಿಗೆ ನಾನು ತೊಂದರೆ ಮಾಡಲ್ಲ ಹೇಳುವ ಮೂಲಕ ಸಿಎಂ ಬೊಮ್ಮಾಯಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago