Featured

ಇವತ್ತಿನಿಂದ ಬಿಜೆಪಿ ಸರ್ಕಾರದ ಕೊನೆಯ ಕ್ಷಣ ಆರಂಭ : ಡಿ.ಕೆ. ಶಿ – VIshwanews24

ಇವತ್ತಿನಿಂದ ಬಿಜೆಪಿ ಸರ್ಕಾರದ ಕೊನೆಯ ಕ್ಷಣ ಆರಂಭ : ಡಿ.ಕೆ. ಶಿ

ಬೆಂಗಳೂರು : ನಾವು ಮೂರು ತಿಂಗಳು ಮೊದಲೇ ಚುನಾವಣೆಗೆ ರೆಡಿ ಇದ್ದೇವೆ, ಅವರು ಹೇಗಾದರೂ ಮಾಡಿಕೊಳ್ಳಲಿ, ಇವತ್ತಿನಿಂದ ಸರ್ಕಾರದ ಕೊನೆಯ ಕ್ಷಣ ಆರಂಭವಾಗಿದೆ. ಬಿಜೆಪಿಯವರು 60-65 ಸೀಟಿಗೆ ಬಂದು ನಿಲ್ತಾರೆ. ನಾವು ನಿಚ್ಚಳವಾದ ಬಹುಮತ ಪಡೆತ್ತೇವೆ. ಎಷ್ಟು ಬೇಗ ಚುನಾವಣೆ ಆಗತ್ತೆ ಅಷ್ಟು ಕಾಂಗ್ರೆಸ್‌ಗೆ ಒಳ್ಳೆದು ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇಂದು ವಿಧಾನಸಭಾ ಚುನಾವಣೆ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಬುಧವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಸರ್ಕಾರ ಅಧಿಕಾರವನ್ನು ಮಿಷನರಿಯನ್ನು ಎಷ್ಟು ದುರ್ಬಳಕೆ ಮಾಡಿಕೊಳ್ಳಬೇಕೋ ಅಷ್ಟು ಮಾಡಿದ್ದಾರೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಸಮಾಧಾನ ಇಲ್ಲ. ಕೋರ್ಟ್‌ಗೆ ಹೋದರೆ ಯಾವುದೂ ನಿಲ್ಲುವುದಿಲ್ಲ. ಅವರು ಮಾಡಿದ ತಪ್ಪನ್ನು ನಾವು ಸರಿ ಮಾಡ್ತೇವೆ. ಮನೆ ಆಸ್ತಿನ ಹಂಚಿಕೊಂಡಂಗೆ ಇವರು ಕೊನೆ ಕ್ಷಣದಲ್ಲಿ ಹಂಚಿಕೊಳ್ಳಲು ಹೊರಟಿದ್ದಾರೆ ಅಂತ ಲೇವಡಿ ಮಾಡಿದ್ದಾರೆ.

ಯಾವ ಶಾಸಕರನ್ನು ಕರೆದುಕೊಂಡು ಹೋಗಿ ಸರ್ಕಾರ ಮಾಡಿದ್ದಾರೆ. ಅವರಿಗೆ ಬಹುಮತ ಬಂದಿತ್ತಾ. ಬಿಜೆಪಿಗೆ ಹೋಗಿದ್ದು ನಮ್ಮ ಶಾಸಕರು ತಾನೇ, ಬಿಜೆಪಿಯಿಂದ ಅವರಾಗೆ ಬರುತ್ತಿದ್ದಾರೆ. ನಮಗೆ ಟಿಕೆಟ್ ಸಹ ನೀಡದಷ್ಟು ರಶ್ ಇದೆ. ಸಿಎಂ ಯಾವ ಪಕ್ಷದಲ್ಲಿ ಇದ್ದವರು, ಈಗ ಯಾವ ಪಕ್ಷಕ್ಕೆ ಬಂದು ಸಿಎಂ ಆಗಿದ್ದಾರೆ. ಸಾಕಷ್ಟು ಜನರು ನಮ್ಮ  ಸಂಪರ್ಕದಲ್ಲಿ ಇದ್ದಾರೆ. ನಾನು ಅವರ ಹೆಸರು ಹೇಳಲು ರೆಡಿ ಇಲ್ಲ. ಅವರಿಗೆ ನಾನು ತೊಂದರೆ ಮಾಡಲ್ಲ ಹೇಳುವ ಮೂಲಕ ಸಿಎಂ ಬೊಮ್ಮಾಯಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago