Featured

ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ : ಸಿದ್ದರಾಮಯ್ಯ -Vishwanews24

ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ ಎಂದು ಎಲ್ಲರು ಆರೋಪಿಸಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.

ಜಾಹಿರಾತು

ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು. ನಾನು ಸರಕಾರ ಬೀಳಿಸುವ ನೀಚ ರಾಜಕಾರಣ ಮಾಡಲ್ಲ. ದೇವೇಗೌಡರು ಬೇರೆ ಸರಕಾರ ಉರುಳಿಸೋದು ಅವರ ಹುಟ್ಟುಗುಣ. ಧರಂ ಸಿಂಗ್ ಗೆ ಬೆಂಬಲ ಕೊಟ್ಟರು, ನಂತರ ಸರಕಾರ ಬೀಳಿಸಿದವರು ಯಾರು? ಬೊಮ್ಮಾಯಿ ಸರಕಾರ ಬೀಳಿಸಿದವರು ಯಾರು? ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago