Featured

ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ : ಸಿದ್ದರಾಮಯ್ಯ -Vishwanews24

ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ ಎಂದು ಎಲ್ಲರು ಆರೋಪಿಸಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.

ಜಾಹಿರಾತು

ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು. ನಾನು ಸರಕಾರ ಬೀಳಿಸುವ ನೀಚ ರಾಜಕಾರಣ ಮಾಡಲ್ಲ. ದೇವೇಗೌಡರು ಬೇರೆ ಸರಕಾರ ಉರುಳಿಸೋದು ಅವರ ಹುಟ್ಟುಗುಣ. ಧರಂ ಸಿಂಗ್ ಗೆ ಬೆಂಬಲ ಕೊಟ್ಟರು, ನಂತರ ಸರಕಾರ ಬೀಳಿಸಿದವರು ಯಾರು? ಬೊಮ್ಮಾಯಿ ಸರಕಾರ ಬೀಳಿಸಿದವರು ಯಾರು? ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago