Featured

ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ : ಸಿದ್ದರಾಮಯ್ಯ -Vishwanews24

ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ ಎಂದು ಎಲ್ಲರು ಆರೋಪಿಸಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.

ಜಾಹಿರಾತು

ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು. ನಾನು ಸರಕಾರ ಬೀಳಿಸುವ ನೀಚ ರಾಜಕಾರಣ ಮಾಡಲ್ಲ. ದೇವೇಗೌಡರು ಬೇರೆ ಸರಕಾರ ಉರುಳಿಸೋದು ಅವರ ಹುಟ್ಟುಗುಣ. ಧರಂ ಸಿಂಗ್ ಗೆ ಬೆಂಬಲ ಕೊಟ್ಟರು, ನಂತರ ಸರಕಾರ ಬೀಳಿಸಿದವರು ಯಾರು? ಬೊಮ್ಮಾಯಿ ಸರಕಾರ ಬೀಳಿಸಿದವರು ಯಾರು? ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago