ಬೆಂಗಳೂರು:ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರಕಾರ ಪತನಕ್ಕೆ ರೇವಣ್ಣ, ಕುಮಾರಸ್ವಾಮಿ ಕಾರಣ ಎಂದು ಎಲ್ಲರು ಆರೋಪಿಸಿದ್ದಾರೆ. ಮೈತ್ರಿ ಸರಕಾರ ಪತನಕ್ಕೆ ದಳಪತಿಗಳೇ ಕಾರಣ ವಿನಃ, ನಾವಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇವರ ಏಕಪಕ್ಷೀಯ ನಿರ್ಧಾರ, ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಸರಕಾರ ಪತನಕ್ಕೆ ಕಾರಣವಾಯಿತು. ನಮ್ಮ ಸರಕಾರ ಉಳಿಯಬೇಕು ಎಂದು ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದೇವೆ. ಇವರ ಉದ್ದೇಶ ನನಗೆ ಗೊತ್ತಿಲ್ಲ. ನನ್ನ ಮೇಲೆ ಆರೋಪ ಮಾಡಿ ಯಾವ ಪಕ್ಷವನ್ನು ಖುಷಿಪಡಿಸಲು ಹೊರಟಿದ್ದಾರೋ ಎಂದು ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನಾಗಬೇಕೆಂಬ ಇಚ್ಛೆಯಿಂದ ಯಡಿಯೂರಪ್ಪ ಜೊತೆ ಕೈಜೋಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೇಶದ ರಾಜಕೀಯದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಾಗಲು ಸರಕಾರ ಬೀಳಿಸಿದ ಚರಿತ್ರೆ ಇಲ್ಲ ಎಂದು ತಿರುಗೇಟು ನೀಡಿದರು.
ಜಾಹಿರಾತು
ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು. ನಾನು ಸರಕಾರ ಬೀಳಿಸುವ ನೀಚ ರಾಜಕಾರಣ ಮಾಡಲ್ಲ. ದೇವೇಗೌಡರು ಬೇರೆ ಸರಕಾರ ಉರುಳಿಸೋದು ಅವರ ಹುಟ್ಟುಗುಣ. ಧರಂ ಸಿಂಗ್ ಗೆ ಬೆಂಬಲ ಕೊಟ್ಟರು, ನಂತರ ಸರಕಾರ ಬೀಳಿಸಿದವರು ಯಾರು? ಬೊಮ್ಮಾಯಿ ಸರಕಾರ ಬೀಳಿಸಿದವರು ಯಾರು? ಇವತ್ತು ಏನಾದರು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…