Featured

ಇಸ್ರೇಲ್ ಮತ್ತು ಇರಾನ್ ಸಂಘರ್ಷ: ಮಾಚ್ 4ರವರೆಗೆ ಮಂಗಳೂರು-ಗಲ್ಫ್ ವಿಮಾನ ಸಂಚಾರ ರದ್ದು – vishwanews24

ಇಸ್ರೇಲ್ ಮತ್ತು ಇರಾನ್ ಸಂಘರ್ಷ: ಮಾಚ್ 4ರವರೆಗೆ ಮಂಗಳೂರು-ಗಲ್ಫ್ ವಿಮಾನ ಸಂಚಾರ ರದ್ದು

ಮಂಗಳೂರು : ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಚಾರವನ್ನು ಮಾರ್ಚ್ 4ರವರೆಗೆ ರದ್ದುಗೊಳಿಸಲಾಗಿದೆ.

ಮಾರ್ಚ್ 3 ರಂದು ಮಂಗಳೂರು-ದೋಹಾ (IX 821), ದೋಹಾ-ಮಂಗಳೂರು (IX 822), ಮಂಗಳೂರು-ದುಬೈ (IX 813), ಮಂಗಳೂರು-ಕುವೈತ್ (IX 851), ಮಂಗಳೂರು-ದಮ್ಮಾಮ್ (IX 847), ಮತ್ತು ಮಂಗಳೂರು-ಅಬುಧಾಬಿ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಅದೇ ರೀತಿ, ಮಾರ್ಚ್ 4 ರಂದು ದುಬೈ-ಮಂಗಳೂರು (IX 814), ಕುವೈತ್-ಮಂಗಳೂರು (IX 852), ದಮ್ಮಾಮ್-ಮಂಗಳೂರು (IX 848), ಮತ್ತು ಅಬುಧಾಬಿ-ಮಂಗಳೂರು (IX 816) ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದುವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಇಸ್ರೇಲ್-ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಗಲ್ಫ್ ರಾಷ್ಟ್ರಗಳಿಗೆ ಪ್ರಯಾಣಿಸಲು ಯೋಜಿಸಿದ್ದ ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago