ಗಾಝಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ 48 ದಿನಗಳ ಸಂಘರ್ಷದಲ್ಲಿ ಮೊದಲ ಬಾರಿಗೆ ಶುಕ್ರವಾರ ಕದನ ವಿರಾಮವನ್ನು ಉಭಯ ಬಣಗಳು ಘೋಷಿಸಿದ್ದು, 24 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, 39 ಮಂದಿ ಫೆಲಸ್ತೀನ್ ಪ್ರಜೆಗಳನ್ನು ಬಂಧಮುಕ್ತಗೊಳಿಸಿದೆ.
ಕತಾರ್ ಮಧ್ಯಸ್ಥಿಕೆಯ ಈ ಕದನ ವಿರಾಮ ಜಾರಿಯ ಬೆನ್ನಲ್ಲೇ ಇಸ್ರೇಲ್ ಹಾಗೂ ಹಮಾಸ್, “ಯುದ್ಧ ಕೊನೆಗಳ್ಳುವುದು ಇನ್ನೂ ಬಹುದೂರ ಇದೆ” ಎಂದು ಹೇಳಿವೆ.
ಉಭಯ ಬಣಗಳು ಅಪ್ರಚೋದಿತ ಗುಂಡಿನ ದಾಳಿ ಮತ್ತು ಇತರ ಉಲ್ಲಂಘನೆಯ ಬಗ್ಗೆ ಪರಸ್ಪರ ಆರೋಪ ಮಾಡಿಕೊಂಡಿದ್ದರೂ, ಶುಕ್ರವಾರ ಯಾವುದೇ ಪ್ರಮುಖ ಬಾಂಬ್ ದಾಳಿ ಅಥವಾ ರಾಕೆಟ್ ದಾಳಿ ನಡೆದಿಲ್ಲ. ಇಸ್ರೇಲ್ ಮಾಧ್ಯಮಗಳ ಪ್ರಕಾರ 13 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮಂದಿ ಥಾಯ್ಲೆಂಡ್ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ.
ಕದನ ವಿರಾಮ ಘೋಷಣೆಯ ಸಂದರ್ಭದಲ್ಲೇ ಉಭಯ ಬಣಗಳು ಪರಸ್ಪರ ಎಚ್ಚರಿಕೆ ನೀಡಿದ್ದು, “ಮುಂದಿನ ದಿನಗಳು ಸಂಕೀರ್ಣ. ಎಲ್ಲವೂ ಮುಗಿಯುವವರೆಗೂ ಯಾವುದೂ ಮುಗಿದಂತಲ್ಲ” ಎಂದು ಇಸ್ರೇಲ್ ರಕ್ಷಣಾ ಪಡೆಗಳ ವಕ್ತಾರರು ಒತ್ತೆಯಾಳು ಒಪ್ಪಂದದ ಬಗ್ಗೆ ಹೇಳಿಕೆ ನೀಡಿದ್ದಾರೆ.
ಯುದ್ಧದ ಎಲ್ಲ ಗುರಿಗಳನ್ನು ಸಾಧಿಸಲು ದೇಶ ಬದ್ಧ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…