Featured

ಇಸ್ರೇಲ್-ಹಮಾಸ್ ಕದನ ವಿರಾಮ: 24 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್ – vishwanews24

ಇಸ್ರೇಲ್-ಹಮಾಸ್ ಕದನ ವಿರಾಮ: 24 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್

ಗಾಝಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ 48 ದಿನಗಳ ಸಂಘರ್ಷದಲ್ಲಿ ಮೊದಲ ಬಾರಿಗೆ ಶುಕ್ರವಾರ ಕದನ ವಿರಾಮವನ್ನು ಉಭಯ ಬಣಗಳು ಘೋಷಿಸಿದ್ದು, 24 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, 39 ಮಂದಿ ಫೆಲಸ್ತೀನ್ ಪ್ರಜೆಗಳನ್ನು ಬಂಧಮುಕ್ತಗೊಳಿಸಿದೆ.

ಕತಾರ್ ಮಧ್ಯಸ್ಥಿಕೆಯ ಈ ಕದನ ವಿರಾಮ ಜಾರಿಯ ಬೆನ್ನಲ್ಲೇ ಇಸ್ರೇಲ್ ಹಾಗೂ ಹಮಾಸ್, “ಯುದ್ಧ ಕೊನೆಗಳ್ಳುವುದು ಇನ್ನೂ ಬಹುದೂರ ಇದೆ” ಎಂದು ಹೇಳಿವೆ.

ಉಭಯ ಬಣಗಳು ಅಪ್ರಚೋದಿತ ಗುಂಡಿನ ದಾಳಿ ಮತ್ತು ಇತರ ಉಲ್ಲಂಘನೆಯ ಬಗ್ಗೆ ಪರಸ್ಪರ ಆರೋಪ ಮಾಡಿಕೊಂಡಿದ್ದರೂ, ಶುಕ್ರವಾರ ಯಾವುದೇ ಪ್ರಮುಖ ಬಾಂಬ್ ದಾಳಿ ಅಥವಾ ರಾಕೆಟ್ ದಾಳಿ ನಡೆದಿಲ್ಲ. ಇಸ್ರೇಲ್ ಮಾಧ್ಯಮಗಳ ಪ್ರಕಾರ 13 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮಂದಿ ಥಾಯ್ಲೆಂಡ್ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ.

ಕದನ ವಿರಾಮ ಘೋಷಣೆಯ ಸಂದರ್ಭದಲ್ಲೇ ಉಭಯ ಬಣಗಳು ಪರಸ್ಪರ ಎಚ್ಚರಿಕೆ ನೀಡಿದ್ದು, “ಮುಂದಿನ ದಿನಗಳು ಸಂಕೀರ್ಣ. ಎಲ್ಲವೂ ಮುಗಿಯುವವರೆಗೂ ಯಾವುದೂ ಮುಗಿದಂತಲ್ಲ” ಎಂದು ಇಸ್ರೇಲ್ ರಕ್ಷಣಾ ಪಡೆಗಳ ವಕ್ತಾರರು ಒತ್ತೆಯಾಳು ಒಪ್ಪಂದದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧದ ಎಲ್ಲ ಗುರಿಗಳನ್ನು ಸಾಧಿಸಲು ದೇಶ ಬದ್ಧ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago