Featured

ಇಸ್ರೇಲ್-ಹಮಾಸ್ ಕದನ ವಿರಾಮ: 24 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್ – vishwanews24

ಇಸ್ರೇಲ್-ಹಮಾಸ್ ಕದನ ವಿರಾಮ: 24 ಒತ್ತೆಯಾಳುಗಳ ಬಿಡುಗಡೆ ಮಾಡಿದ ಹಮಾಸ್

ಗಾಝಾ: ಇಸ್ರೇಲ್ ಹಾಗೂ ಹಮಾಸ್ ನಡುವಿನ 48 ದಿನಗಳ ಸಂಘರ್ಷದಲ್ಲಿ ಮೊದಲ ಬಾರಿಗೆ ಶುಕ್ರವಾರ ಕದನ ವಿರಾಮವನ್ನು ಉಭಯ ಬಣಗಳು ಘೋಷಿಸಿದ್ದು, 24 ಮಂದಿ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಇಸ್ರೇಲ್, 39 ಮಂದಿ ಫೆಲಸ್ತೀನ್ ಪ್ರಜೆಗಳನ್ನು ಬಂಧಮುಕ್ತಗೊಳಿಸಿದೆ.

ಕತಾರ್ ಮಧ್ಯಸ್ಥಿಕೆಯ ಈ ಕದನ ವಿರಾಮ ಜಾರಿಯ ಬೆನ್ನಲ್ಲೇ ಇಸ್ರೇಲ್ ಹಾಗೂ ಹಮಾಸ್, “ಯುದ್ಧ ಕೊನೆಗಳ್ಳುವುದು ಇನ್ನೂ ಬಹುದೂರ ಇದೆ” ಎಂದು ಹೇಳಿವೆ.

ಉಭಯ ಬಣಗಳು ಅಪ್ರಚೋದಿತ ಗುಂಡಿನ ದಾಳಿ ಮತ್ತು ಇತರ ಉಲ್ಲಂಘನೆಯ ಬಗ್ಗೆ ಪರಸ್ಪರ ಆರೋಪ ಮಾಡಿಕೊಂಡಿದ್ದರೂ, ಶುಕ್ರವಾರ ಯಾವುದೇ ಪ್ರಮುಖ ಬಾಂಬ್ ದಾಳಿ ಅಥವಾ ರಾಕೆಟ್ ದಾಳಿ ನಡೆದಿಲ್ಲ. ಇಸ್ರೇಲ್ ಮಾಧ್ಯಮಗಳ ಪ್ರಕಾರ 13 ಮಂದಿ ಇಸ್ರೇಲಿ ಒತ್ತೆಯಾಳುಗಳನ್ನು ಮತ್ತು 12 ಮಂದಿ ಥಾಯ್ಲೆಂಡ್ ಒತ್ತೆಯಾಳುಗಳನ್ನು ಹಮಾಸ್ ಬಿಡುಗಡೆ ಮಾಡಿದೆ.

ಕದನ ವಿರಾಮ ಘೋಷಣೆಯ ಸಂದರ್ಭದಲ್ಲೇ ಉಭಯ ಬಣಗಳು ಪರಸ್ಪರ ಎಚ್ಚರಿಕೆ ನೀಡಿದ್ದು, “ಮುಂದಿನ ದಿನಗಳು ಸಂಕೀರ್ಣ. ಎಲ್ಲವೂ ಮುಗಿಯುವವರೆಗೂ ಯಾವುದೂ ಮುಗಿದಂತಲ್ಲ” ಎಂದು ಇಸ್ರೇಲ್ ರಕ್ಷಣಾ ಪಡೆಗಳ ವಕ್ತಾರರು ಒತ್ತೆಯಾಳು ಒಪ್ಪಂದದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಯುದ್ಧದ ಎಲ್ಲ ಗುರಿಗಳನ್ನು ಸಾಧಿಸಲು ದೇಶ ಬದ್ಧ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

7 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

7 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

8 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

8 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

9 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

9 hours ago