ಇಸ್ರೊ ಮತ್ತೊಂದು ಸಾಧನೆ : 2020ರ ಮೊದಲ ಉಪಗ್ರಹ’ ಜಿಸ್ಯಾಟ್-30 ಯಶಸ್ವಿ ಉಡಾವಣೆ -Vishwanews24

ಹೊಸದಿಲ್ಲಿ,: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸ್ವದೇಶಿ ತಂತ್ರಜ್ಞಾನದ ಮೂಲಕ ನಿರ್ಮಿಸಿರುವ ಸುಧಾರಿತ, ಆಧುನಿಕ ಸಂವಹನ ಉಪಗ್ರಹ ‘ಜಿಸ್ಯಾಟ್-30’  ಫ್ರಾನ್ಸ್ ನ ಗಯಾನಾ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ನಸುಕಿನ ಜಾವ ಯಶಸ್ವಿಯಾಗಿ ಉಡಾವಣೆಯಾಗಿದೆ.

ದಕ್ಷಿಣ ಅಮೆರಿಕಾದ ಈಶಾನ್ಯ ಕರಾವಳಿಯಲ್ಲಿರುವ ಕೌರೌನಲ್ಲಿರುವ ಎರೇನ್ ಉಡ್ಡಯನ ಕಾಂಪ್ಲೆಕ್ಸ್ ನಿಂದ ಭಾರತೀಯ ಕಾಲಮಾನದ ಪ್ರಕಾರ, ಇಂದು ನಸುಕಿನ ಜಾವ 2.35ರ ವೇಳೆಗೆ ‘ಎರೇನ್ 5’ ಎಂಬ ರಾಕೆಟ್ ವಾಹಕದ ಮೂಲಕ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ಹೇಳಿದ್ದಾರೆ.

ಜಿಸ್ಯಾಟ್‌ ಒಟ್ಟು 3357 ಕೆ.ಜಿ ತೂಕ ಹೊಂದಿದ್ದು, ವಿಸ್ಕ್ರತ ವ್ಯಾಪ್ತಿಯೊಂದಿಗೆ ಇನ್ಸಾಟ್‌-4ಎ ಉಪಗ್ರಹದ ಸೇವೆಗಳನ್ನು ಒದಗಿಸಲಿದೆ. ಕೆಯು ಬ್ಯಾಂಡ್‌ ಮತ್ತು ವಿಸ್ತರಿತ ವ್ಯಾಪ್ತಿಯ ಸಿ-ಬ್ಯಾಂಡ್‌ ಸೇವೆಗಳನ್ನು ನೀಡಲಿದ್ದು, ಭಾರತೀಯ ಭೂ ಪ್ರದೇಶ, ದ್ವೀಪ ಪ್ರದೇಶ, ಕೊಲ್ಲಿ ರಾಷ್ಟ್ರಗಳು ಸೇರಿದಂತೆ ಬಹುತೇಕ ಏಷ್ಯನ್‌ ದೇಶಗಳು ಹಾಗೂ ಆಸ್ಟ್ರೇಲಿಯಾದ ವ್ಯಾಪ್ತಿಯಲ್ಲಿಯೂ ಸೇವೆ ನೀಡಲು ಶಕ್ತವಾಗಿದೆ.

ಸುಮಾರು 15 ವರ್ಷಗಳ ಜೀವಿತಾವಧಿಯನ್ನು ಹೊಂದಿರುವ ಜಿಸ್ಯಾಟ್‌-30 ಇಸ್ರೋದ ವಿಸ್ತರಿತ ಐ-3ಕೆ ಬಸ್‌ ಸಂರಚನೆಯನ್ನು ಅಳವಡಿಸಿಕೊಂಡಿದೆ. ಜಿಸ್ಯಾಟ್‌-30 ಕಾರ್ಯ ಪ್ರಾರಂಭಿಸಿದ ನಂತರ, ಗ್ರಮೀಣ ಪ್ರದೇಶಗಳ ಡಿಜಿಟಲ್‌ ಅಂತರವನ್ನು ಕಿರಿದುಗೊಳಿಸಲು ಬಾಹ್ಯಾಕಾಶ ಅನ್ವಯಿಕೆಗಳನ್ನು ಬಳಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

5 minutes ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

18 minutes ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

40 minutes ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

51 minutes ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

1 hour ago

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಸುರತ್ಕಲ್ : ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಬಿಎಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು…

1 hour ago