Featured

ಇಸ್ರೋದಿಂದ ಕಾರ್ಟೊಸಾಟ್-3 ಹಾಗೂ ಅಮೆರಿಕದ 13 ಉಪಗ್ರಹಗಳ ಯಶಸ್ವಿ ಉಡಾವಣೆ -Vishwanews24

ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) ಭೂಮಿ ಚಿತ್ರಣ ಹಾಗೂ ಮ್ಯಾಪ್‍ಗೆ ಸಂಬಂಧಿಸಿದ ಕಾರ್ಟೊಸ್ಯಾಟ್-3 ಸೇರಿದಂತೆ ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾಯಿಸಿದೆ.

ಕಾರ್ಟೊಸ್ಯಾಟ್-3 ಹಾಗೂ ಅಮೆರಿಕದ 13 ಸಣ್ಣ ಉಪಗ್ರಹಗಳು ಸೇರಿ 14 ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ-ಸಿ47 ರಾಕೆಟ್ ಇಂದು ಬೆಳಗ್ಗೆ 9.28ಕ್ಕೆ ನಭಕ್ಕೆ ಚಿಮ್ಮಿದೆ. ಕಾರ್ಟೊಸ್ಯಾಟ್-3 ಅತ್ಯಂತ ಸ್ಪಷ್ಟವಾಗಿ ಫೋಟೊಗಳನ್ನು ಸೆರೆಹಿಡಿಯುವ ಸಾಮರ್ಥ್ಯದ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ಒಟ್ಟು 1,625 ಕೆಜಿ ಭಾರವುಳ್ಳ ಉಹಗ್ರಹಗಳನ್ನು ಪಿಎಸ್‍ಎಲ್‍ವಿ-ಸಿ47 ರಾಕೆಟ್ ಹೊತ್ತೊಯ್ದಿದೆ.

ಮೂರನೇ ತಲೆಮಾರಿನ ಉಪಗ್ರಹವಾಗಿರುವ ಕಾರ್ಟೋಸ್ಯಾಟ್-3 ಅರ್ಥ್ ಇಮೇಜಿಂಗ್ ಮತ್ತು ಮ್ಯಾಪಿಂಗ್​ನ ಕಾರ್ಯ ನಿರ್ವಹಿಸುತ್ತದೆ. ಭೂವೀಕ್ಷಣೆಯ ಉಪಗ್ರಹವಾದ ಇದು ಅತ್ಯುನ್ನತ ರೆಸಲ್ಯೂಷನ್​ನ ಫೋಟೋ ತಂತ್ರಜ್ಞಾನ ಹೊಂದಿದೆ. ಅತ್ಯುತ್ತಮ ರೆಸಲ್ಯೂಷನ್ ಹೊಂದಿರುವ ಭೂಮಿಯ ಚಿತ್ರಗಳನ್ನು ಇದು ಕ್ಲಿಕ್ಕಿಸಬಲ್ಲುದು.

1,625 ಕಿಲೋ ತೂಕವಿರುವ ಕಾರ್ಟೊಸ್ಯಾಟ್-3 ಉಪಗ್ರಹವು ಬೃಹತ್ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯವಾಗಲಿದೆ. ನಗರಾಭಿವೃದ್ಧಿ ಯೋಜನೆ, ಕರಾವಳಿ ಭಾಗದ ಭೂ ಬಳಕೆ ಇತ್ಯಾದಿ ವಿಚಾರಗಳಲ್ಲಿ ಈ ಉಪಗ್ರಹ ಉಪಯುಕ್ತವೆನಿಸಲಿದೆ. ಅದಕ್ಕೆಂದೇ ಈ ಉಪಗ್ರಹವನ್ನು ರೂಪಿಸಿ ಭೂಕಕ್ಷೆಗೆ ಸೇರಿಸಲಾಗಿದೆ. ಈ ಬೃಹತ್ ಉಪಗ್ರಹವು ಐದು ವರ್ಷ ಜೀವಿತಾವಧಿ ಹೊಂದಿದೆ.

ಈ ಬಗ್ಗೆ ಇಸ್ರೋ ಮುಖ್ಯಸ್ಥ ಡಾ.ಕೆ.ಶಿವನ್ ಮಾತನಾಡಿ. ನನಗೆ ಸಂತೋಷವಾಗಿದೆ, ಪಿಎಸ್‍ಎಲ್‍ವಿ-ಸಿ 47 ಇತರೆ 13 ಉಪಗ್ರಹಗಳೊಂದಿಗೆ ನಿಖರವಾಗಿ ಕಕ್ಷೆಯಲ್ಲಿ ಉಡಾವಣೆಯಾಗಿದೆ. ಕಾರ್ಟೊಸಾಟ್ -3 ಅತ್ಯುನ್ನತ ರೆಸಲ್ಯೂಶನ್ ಹೊಂದಿರುವ ಸಿವಿಲಿಯನ್ ಉಪಗ್ರಹವಾಗಿದೆ. ನಾವು ಮಾರ್ಚ್‍ವರೆಗೆ 13 ಯೋಜನೆಗಳು, 6 ದೊಡ್ಡ ವಾಹನ ಯೋಜನೆಗಳು ಮತ್ತು 7 ಉಪಗ್ರಹ ಯೋಜನೆಗಳ ಮೇಲೆ ನಾವು ಕಾರ್ಯ ನಿರ್ವಹಿಸಬೇಕಿದೆ ಎಂದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago