Featured

ಇಸ್ರೋದಿಂದ ಕಾರ್ಟೊಸಾಟ್-3 ಹಾಗೂ ಅಮೆರಿಕದ 13 ಉಪಗ್ರಹಗಳ ಯಶಸ್ವಿ ಉಡಾವಣೆ -Vishwanews24

ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) ಭೂಮಿ ಚಿತ್ರಣ ಹಾಗೂ ಮ್ಯಾಪ್‍ಗೆ ಸಂಬಂಧಿಸಿದ ಕಾರ್ಟೊಸ್ಯಾಟ್-3 ಸೇರಿದಂತೆ ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾಯಿಸಿದೆ.

ಕಾರ್ಟೊಸ್ಯಾಟ್-3 ಹಾಗೂ ಅಮೆರಿಕದ 13 ಸಣ್ಣ ಉಪಗ್ರಹಗಳು ಸೇರಿ 14 ಉಪಗ್ರಹಗಳನ್ನು ಹೊತ್ತ ಪಿಎಸ್‍ಎಲ್‍ವಿ-ಸಿ47 ರಾಕೆಟ್ ಇಂದು ಬೆಳಗ್ಗೆ 9.28ಕ್ಕೆ ನಭಕ್ಕೆ ಚಿಮ್ಮಿದೆ. ಕಾರ್ಟೊಸ್ಯಾಟ್-3 ಅತ್ಯಂತ ಸ್ಪಷ್ಟವಾಗಿ ಫೋಟೊಗಳನ್ನು ಸೆರೆಹಿಡಿಯುವ ಸಾಮರ್ಥ್ಯದ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ಒಟ್ಟು 1,625 ಕೆಜಿ ಭಾರವುಳ್ಳ ಉಹಗ್ರಹಗಳನ್ನು ಪಿಎಸ್‍ಎಲ್‍ವಿ-ಸಿ47 ರಾಕೆಟ್ ಹೊತ್ತೊಯ್ದಿದೆ.

ಮೂರನೇ ತಲೆಮಾರಿನ ಉಪಗ್ರಹವಾಗಿರುವ ಕಾರ್ಟೋಸ್ಯಾಟ್-3 ಅರ್ಥ್ ಇಮೇಜಿಂಗ್ ಮತ್ತು ಮ್ಯಾಪಿಂಗ್​ನ ಕಾರ್ಯ ನಿರ್ವಹಿಸುತ್ತದೆ. ಭೂವೀಕ್ಷಣೆಯ ಉಪಗ್ರಹವಾದ ಇದು ಅತ್ಯುನ್ನತ ರೆಸಲ್ಯೂಷನ್​ನ ಫೋಟೋ ತಂತ್ರಜ್ಞಾನ ಹೊಂದಿದೆ. ಅತ್ಯುತ್ತಮ ರೆಸಲ್ಯೂಷನ್ ಹೊಂದಿರುವ ಭೂಮಿಯ ಚಿತ್ರಗಳನ್ನು ಇದು ಕ್ಲಿಕ್ಕಿಸಬಲ್ಲುದು.

1,625 ಕಿಲೋ ತೂಕವಿರುವ ಕಾರ್ಟೊಸ್ಯಾಟ್-3 ಉಪಗ್ರಹವು ಬೃಹತ್ ಮಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸಹಾಯವಾಗಲಿದೆ. ನಗರಾಭಿವೃದ್ಧಿ ಯೋಜನೆ, ಕರಾವಳಿ ಭಾಗದ ಭೂ ಬಳಕೆ ಇತ್ಯಾದಿ ವಿಚಾರಗಳಲ್ಲಿ ಈ ಉಪಗ್ರಹ ಉಪಯುಕ್ತವೆನಿಸಲಿದೆ. ಅದಕ್ಕೆಂದೇ ಈ ಉಪಗ್ರಹವನ್ನು ರೂಪಿಸಿ ಭೂಕಕ್ಷೆಗೆ ಸೇರಿಸಲಾಗಿದೆ. ಈ ಬೃಹತ್ ಉಪಗ್ರಹವು ಐದು ವರ್ಷ ಜೀವಿತಾವಧಿ ಹೊಂದಿದೆ.

ಈ ಬಗ್ಗೆ ಇಸ್ರೋ ಮುಖ್ಯಸ್ಥ ಡಾ.ಕೆ.ಶಿವನ್ ಮಾತನಾಡಿ. ನನಗೆ ಸಂತೋಷವಾಗಿದೆ, ಪಿಎಸ್‍ಎಲ್‍ವಿ-ಸಿ 47 ಇತರೆ 13 ಉಪಗ್ರಹಗಳೊಂದಿಗೆ ನಿಖರವಾಗಿ ಕಕ್ಷೆಯಲ್ಲಿ ಉಡಾವಣೆಯಾಗಿದೆ. ಕಾರ್ಟೊಸಾಟ್ -3 ಅತ್ಯುನ್ನತ ರೆಸಲ್ಯೂಶನ್ ಹೊಂದಿರುವ ಸಿವಿಲಿಯನ್ ಉಪಗ್ರಹವಾಗಿದೆ. ನಾವು ಮಾರ್ಚ್‍ವರೆಗೆ 13 ಯೋಜನೆಗಳು, 6 ದೊಡ್ಡ ವಾಹನ ಯೋಜನೆಗಳು ಮತ್ತು 7 ಉಪಗ್ರಹ ಯೋಜನೆಗಳ ಮೇಲೆ ನಾವು ಕಾರ್ಯ ನಿರ್ವಹಿಸಬೇಕಿದೆ ಎಂದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

7 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago