Featured

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ ಮುಸ್ಲಿಂ  ಯುವಕ

ಲಕ್ನೋ: ಮುಸ್ಲಿಂ  ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್  ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ:  ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಸೂಫಿಯಾನ್ ನಿಧಿಗೆ ಮೊಬೈಲ್ ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ : ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಲಕ್ನೋ ಪೊಲೀಸರುಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ  ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್  ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago