Featured

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ ಮುಸ್ಲಿಂ  ಯುವಕ

ಲಕ್ನೋ: ಮುಸ್ಲಿಂ  ಯುವಕನೊಬ್ಬ ತನ್ನ 19 ವರ್ಷದ ಹಿಂದೂ ಗೆಳತಿ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಆಕೆಯನ್ನು ಕಟ್ಟಡದ 4ನೇ ಮಹಡಿಯಿಂದ ಎಸೆದು ಕೊಂದಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ಆರೋಪಿ ಸೂಫಿಯಾನ್ ಹಾಗೂ ನಿಧಿ ಗುಪ್ತ (19) ದುಬಗ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೇ ವಾಸಿಸುತ್ತಿದ್ದರು. ನಿಧಿ ಬ್ಯೂಟಿಷಿಯನ್  ತರಬೇತಿ ಪಡೆದಿದ್ದಳು. ಕಳೆದ ಎರಡು ತಿಂಗಳಿನಿಂದ ಇಬ್ಬರು ಸಂಬಂಧ ಹೊಂದಿದ್ದರು. ಇದನ್ನೂ ಓದಿ:  ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಸೂಫಿಯಾನ್ ನಿಧಿಗೆ ಮೊಬೈಲ್ ಸಹ ಕೊಡಿಸಿದ್ದ. ಕರೆ ಮಾಡಿದಾಗೆಲ್ಲಾ, ಸಂದೇಶಗಳನ್ನು ಕಳಿಸುವಾಗ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಬ್ರೈನ್‌ವಾಶ್ ಮಾಡುತ್ತಿದ್ದ. ಈ ವಿಷಯ ತಿಳಿದ ನಿಧಿ ಪೋಷಕರು ಸೂಫಿಯಾನ್ ಮತ್ತು ಅವನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು. ಬಲವಂತವಾಗಿ ಮತಾಂತಗೊಳಿಸಲು ಪ್ರಯತ್ನಿಸುತ್ತಿದ್ದರಿಂದ ನಿಧಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದರು. ಇದರಿಂದ ಕೆಲ ದಿನಗಳಿಂದ ಸೂಫಿಯಾನ್‌ನೊಂದಿಗೆ ಮಾತನಾಡುವುದು ನಿಂತಿತ್ತು. ಆದಾಗ್ಯೂ ಸೂಫಿಯಾನ್ ದುರ್ವರ್ತನೆಯಿಂದ ಪೋಷಕರು ದೂರು ನೀಡಿದ್ದರು. ಬಳಿಕ ರಾಜಿ ಮಾಡಿಕೊಳ್ಳಲಾಗಿತ್ತು. ಆದರೆ ಭಾನುವಾರ ನಿಧಿ ತನ್ನ ಮನೆಯ ನಾಲ್ಕನೇ ಮಹಡಿಗೆ ಬಂದಾಗ ಬಾಲ್ಕನಿಯಿಂದ ಎಸೆದಿದ್ದಾನೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಬಳಿಕ ರಕ್ತದ ಮಡುವಿನಲ್ಲಿದ್ದ ನಿಧಿಯನ್ನು ಇಲ್ಲಿನ ಕಿಂಗ್‌ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಗಂಭೀರ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆಕೆ ಸಾವನ್ನಪ್ಪಿದ್ದಾಳೆ.

ಇದನ್ನೂ ಓದಿ : ಮೋಸ ಹೋಗುವ ಸಂಭವ..▶️ ನೋಡಿ ಇಂದಿನ ದಿನ ಭವಿಷ್ಯ -Vishwanews24

ಲಕ್ನೋ ಪೊಲೀಸರುಕೊಲೆ ಮತ್ತು ಬಲವಂತದ ಮತಾಂತರಕ್ಕೆ ಸಂಬಂಧಿಸಿದಂತೆ ಐಪಿಸಿಯ  ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್  ದಾಖಲಿಸಿದ್ದಾರೆ. ಭಾನುವಾರದಿಂದ ಸುಫಿಯಾನ್ ಮತ್ತು ಕುಟುಂಬ ಪರಾರಿಯಾಗಿದೆ. ಕುಟುಂಬವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

13 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

15 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

15 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

15 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

15 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago