Featured

ಇಸ್ಲಾಮಾಬಾದ್ : ಇಮ್ರಾನ್ ಖಾನ್, ಶಾ ಮೆಹಮೂದ್ ಖುರೇಷಿಗೆ 10ವರ್ಷ ಜೈಲು ಶಿಕ್ಷೆ – vishwanews24

ಇಸ್ಲಾಮಾಬಾದ್ : ಇಮ್ರಾನ್ ಖಾನ್, ಶಾ ಮೆಹಮೂದ್ ಖುರೇಷಿಗೆ 10ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ರಾಜ್ಯದ ರಹಸ್ಯಗಳನ್ನು ಸೋರಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕಾರದಲ್ಲಿದ್ದಾಗ ರಾಜತಾಂತ್ರಿಕ ಕೇಬಲ್ ಅನ್ನು ಸಾರ್ವಜನಿಕಗೊಳಿಸುವುದರ ಮೂಲಕ ರಾಷ್ಟ್ರದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯವು ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಬುವಲ್ ಹಸ್ನಾತ್ ಮುಹಮ್ಮದ್ ಜುಲ್ಕರ್ನೈನ್ ಅವರು ಮಂಗಳವಾರ ಈ ಆದೇಶವನ್ನು ನೀಡಿದ್ದಾರೆ ಎಂದು ಇಮ್ರಾನ್ ಖಾನ್ ಅವರ ವಕೀಲ ಶೋಯೆಬ್ ಶಾಹೀನ್ ಅವರು ಮಾಹಿತಿ ನೀಡಿದ್ದಾರೆ. ಅವರ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಕೂಡ ಇದೇ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದಾರೆ ಎನ್ನಲಾಗಿದೆ.

ಈ ತೀರ್ಪಿನ ವಿರುದ್ಧ ಇಮ್ರಾನ್ ಖಾನ್ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ವಾಷಿಂಗ್ಟನ್‌ನಲ್ಲಿರುವ ದೇಶದ ರಾಯಭಾರಿ ಕಳುಹಿಸಿದ ರಹಸ್ಯ ಕೇಬಲ್‌ನ ವಿಷಯಗಳನ್ನು ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿರುವ ಸರ್ಕಾರಕ್ಕೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಇವರ ಮೇಲಿದೆ.

ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಇಬ್ಬರಿಗೂ ವಿಶೇಷ ನ್ಯಾಯಾಲಯವು ತಲಾ 10 ವರ್ಷಗಳ ಶಿಕ್ಷೆ ವಿಧಿಸಿದೆ ಎಂದು ಇಮ್ರಾನ್ ಖಾನ್ ಅವರ ಪಕ್ಷ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಹೇಳಿದೆ. ಪಕ್ಷವು ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸುತ್ತದೆ ಎಂದು ಅದು ಹೇಳಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago