Featured

ಇಸ್ಲಾಮಾಬಾದ್ : ಇಮ್ರಾನ್ ಖಾನ್, ಶಾ ಮೆಹಮೂದ್ ಖುರೇಷಿಗೆ 10ವರ್ಷ ಜೈಲು ಶಿಕ್ಷೆ – vishwanews24

ಇಸ್ಲಾಮಾಬಾದ್ : ಇಮ್ರಾನ್ ಖಾನ್, ಶಾ ಮೆಹಮೂದ್ ಖುರೇಷಿಗೆ 10ವರ್ಷ ಜೈಲು ಶಿಕ್ಷೆ

ಇಸ್ಲಾಮಾಬಾದ್: ರಾಜ್ಯದ ರಹಸ್ಯಗಳನ್ನು ಸೋರಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಅಧಿಕಾರದಲ್ಲಿದ್ದಾಗ ರಾಜತಾಂತ್ರಿಕ ಕೇಬಲ್ ಅನ್ನು ಸಾರ್ವಜನಿಕಗೊಳಿಸುವುದರ ಮೂಲಕ ರಾಷ್ಟ್ರದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯವು ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಬುವಲ್ ಹಸ್ನಾತ್ ಮುಹಮ್ಮದ್ ಜುಲ್ಕರ್ನೈನ್ ಅವರು ಮಂಗಳವಾರ ಈ ಆದೇಶವನ್ನು ನೀಡಿದ್ದಾರೆ ಎಂದು ಇಮ್ರಾನ್ ಖಾನ್ ಅವರ ವಕೀಲ ಶೋಯೆಬ್ ಶಾಹೀನ್ ಅವರು ಮಾಹಿತಿ ನೀಡಿದ್ದಾರೆ. ಅವರ ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಕೂಡ ಇದೇ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದಾರೆ ಎನ್ನಲಾಗಿದೆ.

ಈ ತೀರ್ಪಿನ ವಿರುದ್ಧ ಇಮ್ರಾನ್ ಖಾನ್ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ವಾಷಿಂಗ್ಟನ್‌ನಲ್ಲಿರುವ ದೇಶದ ರಾಯಭಾರಿ ಕಳುಹಿಸಿದ ರಹಸ್ಯ ಕೇಬಲ್‌ನ ವಿಷಯಗಳನ್ನು ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿರುವ ಸರ್ಕಾರಕ್ಕೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಇವರ ಮೇಲಿದೆ.

ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಇಬ್ಬರಿಗೂ ವಿಶೇಷ ನ್ಯಾಯಾಲಯವು ತಲಾ 10 ವರ್ಷಗಳ ಶಿಕ್ಷೆ ವಿಧಿಸಿದೆ ಎಂದು ಇಮ್ರಾನ್ ಖಾನ್ ಅವರ ಪಕ್ಷ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಹೇಳಿದೆ. ಪಕ್ಷವು ನ್ಯಾಯಾಲಯದ ನಿರ್ಧಾರವನ್ನು ಪ್ರಶ್ನಿಸುತ್ತದೆ ಎಂದು ಅದು ಹೇಳಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

18 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

18 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

18 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

18 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

19 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

20 hours ago