ಇಸ್ಲಾಮಿಕ್ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಪ್ರಭು ಶ್ರೀರಾಮನ ಕುರಿತಂತೆ ಅಲ್ಲಿರುವ ಹಿಂದುಗಳ ಪವಿತ್ರ ಕಾಟಾಸ್ರಾಜ್ ದೇವಸ್ಥಾನದ ಕುರಿತು ಮಹತ್ವದ ತೀರ್ಪನ್ನು ಪಾಕಿಸ್ತಾನದ ಸುಪ್ರೀಂಕೋರ್ಟ್ ಕೊಟ್ಟಿದೆ.
ಆ ದೇವಸ್ಥಾನಕ್ಕೆ ಸಂಭಂದಪಟ್ಟ ಅಧಿಕಾರಿಗಳನ್ನು ತರಾಟಗೆ ತೆಗೆದುಕೊಂಡಿರುವ ಪಾಕಿಸ್ತಾನದ ಹೈಕೋರ್ಟ್, ಶೀಘ್ರದಲ್ಲಿಯೇ ಕಾಟಾಸ್ರಾಜ್ ದೇವಸ್ಥಾನದಲ್ಲಿ ಪ್ರಭು ಶ್ರೀರಾಮ ಚಂದ್ರನ ಮತ್ತು ರಾಮನ ಭಕ್ತ ಭಜರಂಗಿಯ ವಿಗ್ರಹಗಳನ್ನು ಪ್ರತಿಸ್ಠಾಪಿಸುವಂತೆ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಶಕೀಬ್ ನಿಸಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ.
ಪಾಕಿಸ್ತಾನ ಎಂದಾಕ್ಷಣ ಕಣ್ಣೆದುರಿಗೆ ಮೂಡಿಬರುವುದು ಒಂದು ಮುಸ್ಲಿಂ ರಾಷ್ಟ್ರ. ಆದರೆ ಸ್ವಾತಂತ್ರ್ಯಪೂರ್ವದಲ್ಲಿ ಪಾಕಿಸ್ತಾನ ಅಖಂಡ ಭಾರತದ ಒಂದು ಅಂಗವಾಗಿತ್ತು. ಭಾರತದಲ್ಲಿದ್ದ ವಿವಿಧ ಧರ್ಮೀಯರೂ ಅಲ್ಲಿದ್ದರು. ತಾವು ಸ್ಥಿತರಿದ್ದಲ್ಲಿ ಆರಾಧಾನಾಲಯ, ದೇಗುಲಗಳನ್ನೂ ನಿರ್ಮಿಸಿದ್ದರು.
ಭಾರತ ವಿಭಜನೆಗಿಂತ ಮೊದಲು 428 ಹಿಂದೂ ದೇವಾಲಯಗಳು ಆ ಪ್ರದೇಶದಲ್ಲಿ ಇದ್ದವು. ಆದರೆ ಇಂದು ಕೇವಲ 26 ದೇವಾಲಯಗಳು ಮಾತ್ರ ಉಳಿದುಕೊಂಡಿವೆ.
ಪಾಕಿಸ್ತಾನದಲ್ಲಿ ಈಗ ಉಳಿದ ದೇವಾಲಯಗಳ ಪೈಕಿ ಕಾಟಾಸ್ರಾಜ್ ದೇವಾಲಯ ಪ್ರಸಿದ್ಧ ದೆವಾಲಯ. ಜಗತ್ತಿನಲ್ಲಿರೋ ಅತ್ಯಂತ ಪವಿತ್ರ ತೀರ್ಥ ಕ್ಷೇತ್ರದಲ್ಲಿ ಇದು ಎರಡನೇ ಪುಣ್ಯ ತೀರ್ಥ ಕ್ಷೇತ್ರ. ಪಾಕಿಸ್ತಾನದ ನೆಲದಲ್ಲಿ ಬೇರೂರಿರೋ ಹಿಂದೂ ತೀರ್ಥಕ್ಷೆತ್ರದ ಜೀರ್ಣೋದ್ದಾರಕ್ಕೆ, ಸ್ವತಃ ಪಾಕಿಸ್ತಾನಾವೇ ಮುಂದಾಗಿದೆ. ಇದಕ್ಕೆ ಕಾರಣ ಭಾರತದ ಹಿರಿಯ ರಾಜಕೀಯ ಮುತ್ಸದ್ದಿ. ಬಿಜೆಪಿಯ ಭೀಷ್ಮ ಎಲ್.ಕೆ ಅಡ್ವಾಣಿ. ಇದರ ಹಿಂದೆ ಎಲ್.ಕೆ. ಅಡ್ವಾಣಿಯವರ ಪರಿಶ್ರಮವಿದೆ.
ಶತೃ ರಾಷ್ಟ್ರದಲ್ಲಿ ಹಿಂದೂ ದೇವಾಲಯ ತಲೆ ಎತ್ತಿ ನಿಂತದ್ದು ಖುಷಿಯ ವಿಚಾರ. ಹಾಗೂ ವೈರಿ ರಾಷ್ಟ್ರವೇ ದೇವಾಲಯಗಳ ಜೀರ್ಣೋದ್ಧಾರಕ್ಕೆ ನಿಂತಿರೋದು ಸಮಾಧಾನಕರ ಸಂಗತಿ. ಈಗ ಪಾಕಿಸ್ತಾನದ ಸುಪ್ರೀಂಕೋರ್ಟ್ ಕಾಟಾಸರಾಜ್ ದೇವಾಲಯದಲ್ಲಿ ಪ್ರಭು ಶ್ರೀರಾಮನ ಮತ್ತು ರಾಮನ ಭಕ್ತ ಹನುಮಾನನ ವಿಗ್ರಹ ಪ್ರತಿಷ್ಠಾಪನೆಗೆ ಆದೇಶ ಕೊಟ್ಟಿರುವುದು, ಹಿಂದುಗಳು ಹೆಮ್ಮೆ ಪಡಬೇಕಾದ ವಿಷಯ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…